Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...