Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...