Homeಕರ್ನಾಟಕರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

- Advertisement -
- Advertisement -

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅಜಯ್ ಮಾಕನ್ 47, ಸೈಯ್ಯದ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ ತಲಾ 46 ಮತಗಳನ್ನು ಪಡೆದು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ, ಪುಟ್ಟಸ್ವಾಮಿ ಗೌಡ, ಜನಾರ್ದನ ರೆಡ್ಡಿ ಮತ್ತು ದರ್ಶನ್ ಪುಟ್ಟಣ್ಣಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದರು.

ಬಿಜೆಪಿ ಅಭ್ಯರ್ಥಿ ನಾರಾಯಣಾಸಾ ಬಾಂಡಗೆ ಅವರು 47 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರಿಗೆ ನಿರಾಸೆಯಾಗಿದೆ. ವರದಿಗಳ ಪ್ರಕಾರ, ಜೆಡಿಎಸ್‌ನ ಎಲ್ಲ ಶಾಸಕರು ತಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮತದಾನ ನಡೆದಿದ್ದು, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು.

ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ

ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ” ಎಂದಿದ್ದಾರೆ.

“ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ” ಎಂದು ಹೇಳಿದ್ದಾರೆ.

ಶಿವರಾಮ್ ಹೆಬ್ಬಾರ್ ಗೈರು

ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ರಾಜ್ಯಸಭೆ ಚುನಾವಣೆಗೆ ಗೈರಾಗಿದ್ದಾರೆ. ಇಂದು ಬೆಳಗಿನವರೆಗೆ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದ ಹೆಬ್ಬಾರ್ ಅವರು ಮತದಾನ ಆರಂಭಕ್ಕೆ ಕೆಲವೇ ಗಂಟೆಗಳು ಮೊದಲು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾದರು.

ಹೆಬ್ಬಾರ್ ಅವರು ಎಲ್ಲಿದ್ದಾರೆ ಎಂದು ಬಿಜೆಪಿ ನಾಯಕರು ಅವರನ್ನು ಹುಡುಕಲು ಮಾಡಿದ ಎಲ್ಲ ಪ್ರಯತ್ನ ವಿಫಲವಾದವು. ಕೊನೆಗೆ ಪಕ್ಷದ ಶಾಸಕಾಂಗ ಕಾರ್ಯದರ್ಶಿ ಹೆಬ್ಬಾರ್ ಅವರ ಶಾಸಕರ ಭವನದ ಕಚೇರಿಗೆ ತೆರಳಿ ಕಚೇರಿಯ ಬಾಗಿಲಿಗೆ ಪಕ್ಷದ ವಿಪ್ ಅಂಟಿಸಿದರು. ಆನಂತರ ಪಕ್ಷದ ಇತರೆ ಮುಖಂಡರು ಅವರ ನಿವಾಸಕ್ಕೂ ತೆರಳಿದ ಮನೆಯ ಬಾಗಿಲಿಗೆ ವಿಪ್ ಅಂಟಿಸಿ ಬಂದರು.

ಬಿಜೆಪಿ ನಾಯಕರು ಹೆಬ್ಬಾರ್ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರೂ, ಅದು ಸಫಲವಾಗಿಲ್ಲ. ಅಷ್ಟೊತ್ತಿಗೆ ಮತದಾನದ ಸಮಯವಾದ್ದರಿಂದ ಬಿಜೆಪಿ ನಾಯಕರು ಹೆಬ್ಬಾರ್ ಅವರನ್ನು ಸಂಪರ್ಕಿಸುವ ಪ್ರಯತ್ನ ಕೈ ಬಿಟ್ಟರು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...