Homeಕರ್ನಾಟಕರಾಜ್ಯಸಭಾ ಚುನಾವಣೆ: ರಾಜ್ಯ ಘಟಕದ ಶಿಫಾರಸ್ಸು ತಿರಸ್ಕರಿಸಿ ಬೇರೆ ಹೆಸರನ್ನು ಘೋಷಿಸಿದ ಬಿಜೆಪಿ ಹೈಕಮಾಂಡ್

ರಾಜ್ಯಸಭಾ ಚುನಾವಣೆ: ರಾಜ್ಯ ಘಟಕದ ಶಿಫಾರಸ್ಸು ತಿರಸ್ಕರಿಸಿ ಬೇರೆ ಹೆಸರನ್ನು ಘೋಷಿಸಿದ ಬಿಜೆಪಿ ಹೈಕಮಾಂಡ್

- Advertisement -
- Advertisement -

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಹೈಕಮಾಂಡ್ ಈರಣ್ಣಾ ಕಡಾಡಿ ಮತ್ತು ಅಶೋಕ್ ಗಸ್ತಿ ಅವರ ಉಮೇದುವಾರಿಕೆಯನ್ನು ಘೋಷಿಸಿದೆ. ಈ ಮೂಲಕ ಪಕ್ಷದ ರಾಜ್ಯ ಘಟಕ ಶಿಫಾರಸು ಮಾಡಿದ ಹೆಸರುಗಳನ್ನು ತಿರಸ್ಕರಿಸಿ ಅಚ್ಚರಿಮೂಡಿಸಿದೆ.

ರಾಜ್ಯ ಘಟಕವು ಪಕ್ಷದ ಉನ್ನತ ನಾಯಕರಿಗೆ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಲೋಕಸಭಾ ಮಾಜಿ ಸದಸ್ಯ ರಮೇಶ್ ಕತ್ತಿ ಮತ್ತು ಹೋಟೆಲ್ ಉದ್ಯಮಿ ಪ್ರಕಾಶ್ ಶೆಟ್ಟಿ ಒಟ್ಟು ಮೂರು ಹೆಸರುಗಳನ್ನು ಅನುಮೋದನೆಗಾಗಿ ಶಿಫಾರಸು ಮಾಡಿತ್ತು. ಆದಾಗ್ಯೂ, ಬಿಜೆಪಿ ಹೈಕಮಾಂಡ್ ಈ ಎಲ್ಲಾ ಮೂರು ಹೆಸರುಗಳನ್ನು ತಿರಸ್ಕರಿಸಿದೆ.

ಬಿಜೆಪಿ ಹೈಕಮಾಂಡ್‌ನ ಈ ಅಚ್ಚರಿದಾಯಕ ನಡೆಯು ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ಪ್ರಭಾವವನ್ನು ಹಂತಹಂತವಾಗಿ ತಗ್ಗಿಸುವ ಪ್ರಯತ್ನವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

“ಕಡಾಡಿ ಮತ್ತು ಗಸ್ತಿ ಇಬ್ಬರೂ ಪಕ್ಷದ ತಳಮಟ್ಟದ ಕಾರ್ಯಕರ್ತರು ಹಾಗೂ ಹಲವಾರು ದಶಕಗಳಿಂದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ, ಪಕ್ಷದ ಉನ್ನತ ನಾಯಕರು ಅವರ ಹೆಸರನ್ನು ಮೇಲ್ಮನೆ ಚುನಾವಣೆಗೆ ಅನುಮೋದಿಸಿದರು” ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದರು ಎಂದು ವರದಿಯಾಗಿದೆ.

ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಹಿಂದೆ ಅವರು ಪಕ್ಷದ ಬೆಳಗವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಶೋಕ್ ಗಸ್ತಿ ರಾಯಚೂರು ಜಿಲ್ಲೆಯ ಸವಿತಾ ಸಮಾಜ ಸಮುದಾಯಕ್ಕೆ ಸೇರಿದವರು. ಅವರು ಬಳ್ಳಾರಿ ಜಿಲ್ಲೆಯ ಪಕ್ಷದ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

“ಹಲವಾರು ನಾಯಕರ ತೀವ್ರ ಲಾಬಿ ಹೊರತಾಗಿಯೂ, ರಾಜ್ಯಸಭಾ ಚುನಾವಣೆಗೆ ಸಾಮಾನ್ಯ ಕಾರ್ಯಕರ್ತರನ್ನು ಆಯ್ಕೆ ಮಾಡುವ ಮೂಲಕ, ಪಕ್ಷವು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿದೆ. ಮಾತ್ರವಲ್ಲದೆ ಹಣದ ಚೀಲ ಮತ್ತು ಪ್ರಭಾವಿ ವ್ಯಕ್ತಿಗಳು ಮೇಲ್ಮನೆ ಸದಸ್ಯತ್ವವನ್ನು ಪಡೆಯಬಾರದು ಎಂದು ಖಚಿತಪಡಿಸಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆ ಜೂನ್ 19 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 9 ಕೊನೆಯ ದಿನಾಂಕವಾಗಿದೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಮತ್ತು ಪ್ರೊ.ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.


ಓದಿ: ರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...