Homeಕರ್ನಾಟಕರಾಜ್ಯಸಭಾ ಚುನಾವಣೆ: ರಾಜ್ಯ ಘಟಕದ ಶಿಫಾರಸ್ಸು ತಿರಸ್ಕರಿಸಿ ಬೇರೆ ಹೆಸರನ್ನು ಘೋಷಿಸಿದ ಬಿಜೆಪಿ ಹೈಕಮಾಂಡ್

ರಾಜ್ಯಸಭಾ ಚುನಾವಣೆ: ರಾಜ್ಯ ಘಟಕದ ಶಿಫಾರಸ್ಸು ತಿರಸ್ಕರಿಸಿ ಬೇರೆ ಹೆಸರನ್ನು ಘೋಷಿಸಿದ ಬಿಜೆಪಿ ಹೈಕಮಾಂಡ್

- Advertisement -
- Advertisement -

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಹೈಕಮಾಂಡ್ ಈರಣ್ಣಾ ಕಡಾಡಿ ಮತ್ತು ಅಶೋಕ್ ಗಸ್ತಿ ಅವರ ಉಮೇದುವಾರಿಕೆಯನ್ನು ಘೋಷಿಸಿದೆ. ಈ ಮೂಲಕ ಪಕ್ಷದ ರಾಜ್ಯ ಘಟಕ ಶಿಫಾರಸು ಮಾಡಿದ ಹೆಸರುಗಳನ್ನು ತಿರಸ್ಕರಿಸಿ ಅಚ್ಚರಿಮೂಡಿಸಿದೆ.

ರಾಜ್ಯ ಘಟಕವು ಪಕ್ಷದ ಉನ್ನತ ನಾಯಕರಿಗೆ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಲೋಕಸಭಾ ಮಾಜಿ ಸದಸ್ಯ ರಮೇಶ್ ಕತ್ತಿ ಮತ್ತು ಹೋಟೆಲ್ ಉದ್ಯಮಿ ಪ್ರಕಾಶ್ ಶೆಟ್ಟಿ ಒಟ್ಟು ಮೂರು ಹೆಸರುಗಳನ್ನು ಅನುಮೋದನೆಗಾಗಿ ಶಿಫಾರಸು ಮಾಡಿತ್ತು. ಆದಾಗ್ಯೂ, ಬಿಜೆಪಿ ಹೈಕಮಾಂಡ್ ಈ ಎಲ್ಲಾ ಮೂರು ಹೆಸರುಗಳನ್ನು ತಿರಸ್ಕರಿಸಿದೆ.

ಬಿಜೆಪಿ ಹೈಕಮಾಂಡ್‌ನ ಈ ಅಚ್ಚರಿದಾಯಕ ನಡೆಯು ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ಪ್ರಭಾವವನ್ನು ಹಂತಹಂತವಾಗಿ ತಗ್ಗಿಸುವ ಪ್ರಯತ್ನವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

“ಕಡಾಡಿ ಮತ್ತು ಗಸ್ತಿ ಇಬ್ಬರೂ ಪಕ್ಷದ ತಳಮಟ್ಟದ ಕಾರ್ಯಕರ್ತರು ಹಾಗೂ ಹಲವಾರು ದಶಕಗಳಿಂದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ, ಪಕ್ಷದ ಉನ್ನತ ನಾಯಕರು ಅವರ ಹೆಸರನ್ನು ಮೇಲ್ಮನೆ ಚುನಾವಣೆಗೆ ಅನುಮೋದಿಸಿದರು” ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದರು ಎಂದು ವರದಿಯಾಗಿದೆ.

ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಹಿಂದೆ ಅವರು ಪಕ್ಷದ ಬೆಳಗವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಶೋಕ್ ಗಸ್ತಿ ರಾಯಚೂರು ಜಿಲ್ಲೆಯ ಸವಿತಾ ಸಮಾಜ ಸಮುದಾಯಕ್ಕೆ ಸೇರಿದವರು. ಅವರು ಬಳ್ಳಾರಿ ಜಿಲ್ಲೆಯ ಪಕ್ಷದ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

“ಹಲವಾರು ನಾಯಕರ ತೀವ್ರ ಲಾಬಿ ಹೊರತಾಗಿಯೂ, ರಾಜ್ಯಸಭಾ ಚುನಾವಣೆಗೆ ಸಾಮಾನ್ಯ ಕಾರ್ಯಕರ್ತರನ್ನು ಆಯ್ಕೆ ಮಾಡುವ ಮೂಲಕ, ಪಕ್ಷವು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿದೆ. ಮಾತ್ರವಲ್ಲದೆ ಹಣದ ಚೀಲ ಮತ್ತು ಪ್ರಭಾವಿ ವ್ಯಕ್ತಿಗಳು ಮೇಲ್ಮನೆ ಸದಸ್ಯತ್ವವನ್ನು ಪಡೆಯಬಾರದು ಎಂದು ಖಚಿತಪಡಿಸಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆ ಜೂನ್ 19 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 9 ಕೊನೆಯ ದಿನಾಂಕವಾಗಿದೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಮತ್ತು ಪ್ರೊ.ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.


ಓದಿ: ರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...