Homeಮುಖಪುಟರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

ರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ಸೋಮವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರನ್ನು ಅಭ್ಯರ್ಥಿಗಳಾಗಿ ಸೂಚಿಸಿದೆ.

ಸಾಕೇತ್ ಗೋಖಲೆ ಜೊತೆಗೆ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್, ಸಂಸದರಾದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಟಿಎಂಸಿ ಸದಸ್ಯರಾದ ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಚಿಕ್ ಬರಾಕ್ ಅವರನ್ನು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೆಸರಿಸಿದೆ.

ಓ’ಬ್ರೇನ್, ಸೇನ್ ಮತ್ತು ರೇಗೆ ಇದು ಪುನರಾವರ್ತಿತ ಆಯ್ಕೆಯಾಗಿದೆ. ಆದರೆ ಗೋಖಲೆಯವರು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಇದೇ ಮೊದಲು. ಗೋಖಲೆ ಅವರ ಜೊತೆಗೆ, ಇತರ ಇಬ್ಬರು ಹೊಸ ಮುಖಗಳು ಇಸ್ಲಾಂ, ಬಾಂಗ್ಲಾ ಸಂಸ್ಕೃತಿ ಮಂಚ ಅಧ್ಯಕ್ಷ ಸಮೀರುಲ್ ಇಸ್ಲಾಂ ಮತ್ತು ಟಿಎಂಸಿಯ ಅಲಿಪುರ್ದೂರ್ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಚಿಕ್ ಬರಾಕ್ ನಾಮನಿರ್ದೇಶನಗೊಂಡಿದ್ದಾರೆ.

”ಮುಂಬರುವ ರಾಜ್ಯಸಭಾ ಚುನಾವಣೆಗೆ ಸಂಸದ ಡೆರೆಕ್ ಒ’ಬ್ರೇನ್, ಸಂಸದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಸಮೀರುಲ್ ಇಸ್ಲಾಂ, ಪ್ರಕಾಶ್ ಚಿಕ್ ಬರಾಕ್ ಮತ್ತು ಸಾಕೇತ್ ಗೋಖಲೆ ಅವರ ಉಮೇದುವಾರಿಕೆಯನ್ನು ಘೋಷಿಸಲು ನಾವು ಬಹಳ ಸಂತೋಷಪಡುತ್ತೇವೆ. ಅವರು ಜನರಿಗೆ ಇನ್ನಷ್ಟು ಸೇವೆ ಸಲ್ಲಿಸುವುದನ್ನು ಮುಂದುವರೆಸಲಿ. ಎಲ್ಲರಿಗೂ ನಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇವೆ” ಎಂದು ಟಿಎಂಸಿ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಗೋಖಲೆ ಅವರು, ”ನನ್ನ ಮೇಲಿನ ನಂಬಿಕೆ ಮತ್ತು ರಾಜಕೀಯೇತರ ಹಿನ್ನೆಲೆಯಿಂದ ಬಂದ ಮಧ್ಯಮ ವರ್ಗದ ಯುವಕನಿಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅವರು ನನ್ನ ಶಕ್ತಿಯ ಮೂಲವಾಗಿದ್ದಾರೆ, ಸಾರ್ವಜನಿಕ ಸೇವೆಗಾಗಿ ನನ್ನ ಸ್ಫೂರ್ತಿ ಮತ್ತು ಕಠಿಣ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬಕ್ಕೆ ಬೆಂಬಲವಾಗಿ ನಿಂತ ಗಟ್ಟಿಯಾದ ಕಂಬಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಓ’ಬ್ರೇನ್ ಅವರನ್ನು ”ಮಾರ್ಗದರ್ಶಿ ಮತ್ತು ರಕ್ಷಾಕವಚ” ಎಂದು ಗೋಖಲೆ ಕರೆದಿದ್ದಾರೆ. ”ಡೆರೆಕ್ ಒ’ಬ್ರೇನ್ ಅವರು ನನಗೆ ರಾಜಕೀಯದ ಪಾಠವನ್ನು ಕಲಿಸಿದ್ದಾರೆ ಮತ್ತು ಜೀವನದ ಪ್ರತಿ ಹಂತದಲ್ಲೂ ನನ್ನ ಸಲಹೆಗಾರರಾಗಿದ್ದಾರೆ” ಎಂದು ಗೋಖಲೆ ಹೇಳಿದ್ದಾರೆ.

”ಓ’ಬ್ರೇನ್, ರೇ ಮತ್ತು ಸೇನ್ ಅವರಲ್ಲದೆ, ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ, ಟಿಎಂಸಿಯ ಅಸ್ಸಾಂ ನಾಯಕಿ ಸುಶ್ಮಿತಾ ದೇವ್ ಮತ್ತು ಅದರ ಡಾರ್ಜಿಲಿಂಗ್ ನಾಯಕಿ ಶಾಂತಾ ಛೆಟ್ರಿ ಅವರ ಅಧಿಕಾರಾವಧಿ ಕೊನೆಗೊಂಡಿದ್ದು, ಈ ಸ್ಥಾನಗಳು ಇದೀಗ ಒಟ್ಟು ಆರು ಸ್ಥಾನಗಳು ಖಾಲಿಯಾದವು.

ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಏಪ್ರಿಲ್‌ನಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಶ್ಚಿಮ ಬಂಗಾಳದಿಂದ ಏಳನೇ ರಾಜ್ಯಸಭಾ ಸ್ಥಾನವೂ ಖಾಲಿಯಾಗಿದೆ. ಜುಲೈ 24 ರಂದು ಈ ಆರು ಸ್ಥಾನಗಳಿಗೆ ಚುನಾವಣೆಯೊಂದಿಗೆ ಆ ಸ್ಥಾನಕ್ಕೂ ಉಪಚುನಾವಣೆ ನಡೆಯಲಿದೆ.

ಭಾರತದ ಚುನಾವಣಾ ಆಯೋಗವು ಗುಜರಾತ್, ಪಶ್ಚಿಮ ಬಂಗಾಳ ಮತ್ತು ಗೋವಾ ಸೇರಿ ಒಟ್ಟು ಹತ್ತು ರಾಜ್ಯಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಜುಲೈ 24 ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಯಾ ಸದಸ್ಯರ ನಿವೃತ್ತಿಯಿಂದಾಗಿ ಈ ಮೂರು ರಾಜ್ಯಗಳಲ್ಲಿ 10 ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತಿವೆ.

ಪಶ್ಚಿಮ ಬಂಗಾಳದಿಂದ, ಟಿಎಂಸಿ ಪಕ್ಷದ ಸದಸ್ಯರಲ್ಲಿ ಡೆರೆಕ್ ಒ’ಬ್ರೇನ್, ಡೋಲಾ ಸೇನ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ ಮತ್ತು ಸುಖೇಂದು ಶೇಖರ್ ರೇ ಸೇರಿದಂತೆ ಅವರ ಅವಧಿ ಮುಗಿಯುತ್ತಿದೆ. ಮಾಜಿ ಕಾಂಗ್ರೆಸ್ ಸದಸ್ಯರಾದ ದೇವ್ ಮತ್ತು ಛೆಟ್ರಿ ಅವರನ್ನು ಸದ್ಯಕ್ಕೆ ಹೊರಗಿಡಲಾಗಿದೆ.

ಇದನ್ನೂ ಓದಿ: ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...