Homeಕರ್ನಾಟಕರಾಜ್ಯಸಭಾ ಚುನಾವಣೆ: ಕಾಂಗ್ರೇಸ್‌ನಿಂದ ಖರ್ಗೆ, ಜೆಡಿಎಸ್‌ನಿಂದ ದೇವೇಗೌಡರು ಕಣಕ್ಕೆ

ರಾಜ್ಯಸಭಾ ಚುನಾವಣೆ: ಕಾಂಗ್ರೇಸ್‌ನಿಂದ ಖರ್ಗೆ, ಜೆಡಿಎಸ್‌ನಿಂದ ದೇವೇಗೌಡರು ಕಣಕ್ಕೆ

- Advertisement -
- Advertisement -

ಜೂನ್ 19 ರಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯದ ನಾಲ್ಕು ಸ್ಥಾನಗಳಲ್ಲಿ ಎರಡಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ತಮ್ಮ ಅಭ್ಯರ್ಥಿಯನ್ನಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್ ಪಕ್ಷವೂ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

ಇಂದು ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ರಾಜ್ಯಸಭೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಇವತ್ತಿನ ಸಂದರ್ಭದಲ್ಲಿ ದೇಶಕ್ಕೆ ದೇವೇಗೌಡರಂತಹ ನಾಯಕರ ಅವಶ್ಯಕತೆ ಇದೆ. ಇಲ್ಲಿಯ ತನಕ ಯಾವ ಕಾಂಗ್ರೆಸ್ ನಾಯಕರೂ ನಮ್ಮನ್ನು ಸಂಪರ್ಕ ಮಾಡಿಲ್ಲ. ಆದರೆ ದೇವೇಗೌಡರು ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದರು.

ರಾಜ್ಯಸಭೆಗೆ ಆಯ್ಕೆ ಆಗಲು ಮೊದಲ ಪ್ರಾಶಸ್ತ್ಯದ 48 ಶಾಸಕರ ಮತಗಳು ಬೇಕು. ಜೆಡಿಎಸ್ ಬಳಿ 34 ಶಾಸಕರಿದ್ದಾರೆ. ಅಲ್ಲಿಗೆ ಇನ್ನು 14 ಮತಗಳು ಕೊರತೆಯಾಗಲಿದ್ದು, ದೇವೇಗೌಡರು ಸ್ಪರ್ಧೆ ಮಾಡಿದರೆ ಈ ಮತಗಳನ್ನು 64 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಒಪ್ಪಿ, ಅನುಮತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಸಭೆ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಹಲವು ಮುಖಂಡರ ನಡುವೆ ಪೈಪೋಟಿ ನಡೆದಿತ್ತು. ಇದೀಗ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

ಕಾಂಗ್ರೆಸ್ ನಿಂದ ತುಮಕೂರಿನ ಮುದ್ದಹನುಮೇಗೌಡ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಖರ್ಗೆ ಹೆಸರನ್ನು ಹೈಕಮಾಂಡ್‌ಗೆ ಸಿದ್ದರಾಮಯ್ಯ ಅವರು ಕೂಡ ಶಿಫಾರಸ್ಸು ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಖಚಿತವಾಗಿದೆ.

ಸೋಲಿಲ್ಲದ ಸರದಾರ ಎಂದು ಕರೆಸಿಕೊಂಡಿದ್ದ ಖರ್ಗೆಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಅಲ್ಲದೆ, ಜೆಡಿಎಸ್‌ ವರಿಷ್ಟ ದೇವೇಗೌಡರೂ ಸಹ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದು, ಅವರೂ ಕೂಡ ಕಾಂಗ್ರೆಸ್‌ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶ ಪಡೆಯಲು ಮುಂದಾಗಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ಬಿಜೆಪಿಯ ಒಳಗೇ ಗಹಗ್ಗಜಗ್ಗಾಟ ನಡೆಯುತ್ತಿದೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....