Homeಕರ್ನಾಟಕರಾಜ್ಯಸಭಾ ಚುನಾವಣೆ: ಕಾಂಗ್ರೇಸ್‌ನಿಂದ ಖರ್ಗೆ, ಜೆಡಿಎಸ್‌ನಿಂದ ದೇವೇಗೌಡರು ಕಣಕ್ಕೆ

ರಾಜ್ಯಸಭಾ ಚುನಾವಣೆ: ಕಾಂಗ್ರೇಸ್‌ನಿಂದ ಖರ್ಗೆ, ಜೆಡಿಎಸ್‌ನಿಂದ ದೇವೇಗೌಡರು ಕಣಕ್ಕೆ

- Advertisement -
- Advertisement -

ಜೂನ್ 19 ರಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯದ ನಾಲ್ಕು ಸ್ಥಾನಗಳಲ್ಲಿ ಎರಡಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ತಮ್ಮ ಅಭ್ಯರ್ಥಿಯನ್ನಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್ ಪಕ್ಷವೂ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

ಇಂದು ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ರಾಜ್ಯಸಭೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಇವತ್ತಿನ ಸಂದರ್ಭದಲ್ಲಿ ದೇಶಕ್ಕೆ ದೇವೇಗೌಡರಂತಹ ನಾಯಕರ ಅವಶ್ಯಕತೆ ಇದೆ. ಇಲ್ಲಿಯ ತನಕ ಯಾವ ಕಾಂಗ್ರೆಸ್ ನಾಯಕರೂ ನಮ್ಮನ್ನು ಸಂಪರ್ಕ ಮಾಡಿಲ್ಲ. ಆದರೆ ದೇವೇಗೌಡರು ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದರು.

ರಾಜ್ಯಸಭೆಗೆ ಆಯ್ಕೆ ಆಗಲು ಮೊದಲ ಪ್ರಾಶಸ್ತ್ಯದ 48 ಶಾಸಕರ ಮತಗಳು ಬೇಕು. ಜೆಡಿಎಸ್ ಬಳಿ 34 ಶಾಸಕರಿದ್ದಾರೆ. ಅಲ್ಲಿಗೆ ಇನ್ನು 14 ಮತಗಳು ಕೊರತೆಯಾಗಲಿದ್ದು, ದೇವೇಗೌಡರು ಸ್ಪರ್ಧೆ ಮಾಡಿದರೆ ಈ ಮತಗಳನ್ನು 64 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಒಪ್ಪಿ, ಅನುಮತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಸಭೆ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಹಲವು ಮುಖಂಡರ ನಡುವೆ ಪೈಪೋಟಿ ನಡೆದಿತ್ತು. ಇದೀಗ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

ಕಾಂಗ್ರೆಸ್ ನಿಂದ ತುಮಕೂರಿನ ಮುದ್ದಹನುಮೇಗೌಡ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಖರ್ಗೆ ಹೆಸರನ್ನು ಹೈಕಮಾಂಡ್‌ಗೆ ಸಿದ್ದರಾಮಯ್ಯ ಅವರು ಕೂಡ ಶಿಫಾರಸ್ಸು ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಖಚಿತವಾಗಿದೆ.

ಸೋಲಿಲ್ಲದ ಸರದಾರ ಎಂದು ಕರೆಸಿಕೊಂಡಿದ್ದ ಖರ್ಗೆಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಅಲ್ಲದೆ, ಜೆಡಿಎಸ್‌ ವರಿಷ್ಟ ದೇವೇಗೌಡರೂ ಸಹ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದು, ಅವರೂ ಕೂಡ ಕಾಂಗ್ರೆಸ್‌ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶ ಪಡೆಯಲು ಮುಂದಾಗಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ಬಿಜೆಪಿಯ ಒಳಗೇ ಗಹಗ್ಗಜಗ್ಗಾಟ ನಡೆಯುತ್ತಿದೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...