Homeಮುಖಪುಟರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

ರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

- Advertisement -
- Advertisement -

ಇಂದು ನಡೆಯುತ್ತಿರುವ 24 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರಾದ ಕುನಾಲ್ ಚೌಧರಿಯವರು ಕೊರೊನಾ ಸೋಂಕಿತರಾದ ಕಾರಣದಿಂದ ಭೋಪಾಲ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಕೊರೊನಾ ಪರೀಕ್ಷೆಯಲ್ಲಿ ಚೌಧರಿಯವರು ಸಾಂಕ್ರಾಮಿಕ COVID-19 ಪಾಸಿಟಿವ್‌ ಆಗಿದ್ದರು.

ಕನಿಷ್ಠ 205 ಶಾಸಕರು ಈಗಾಗಲೇ ಮತ ಚಲಾಯಿಸಿದ ನಂತರ ಅವರ ಮತದಾನದ ಸರದಿ ಬಂದಿತು. ಮುಡಿಯಿಂದ ಅಡಿವರೆಗೂ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ ಸೂಟ್) ತೊಟ್ಟಿದ್ದ ಅವರು ಕೈಯಲ್ಲಿ ಮೊಬೈಲ್ ಫೋನ್ ಹಿಡಿದುಕೊಂಡು ಮತದಾನದ ಕೋಣೆಗೆ ಕಾಲಿಟ್ಟರು.

ವೈರಸ್ ಉಸಿರಾಟದ ಹನಿಗಳಿಂದ ಹರಡುತ್ತದೆ ಎಂದು ಭಾವಿಸಿರುವ ಹಲವರು ಚೌಧರಿಯವರಿಂದ ಅಂತರ ಕಾಯ್ದುಕೊಂಡಿದ್ದರು.

ಶಾಸಕರು ಜೂನ್ 6 ರಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೂನ್‌ 10ರಂದು ಪರೀಕ್ಷೆಗೆ ಒಳಗಾದರು ಮತ್ತು ಕೊರೊನಾ ಪಾಸಿಟಿವ ವರದಿ ಜೂನ್ 12 ರಂದು ಬಂದಿತು ಎಂದು ವರದಿಯಾಗಿದೆ.

“ಪೂರ್ಣ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ನಾನು ಮಧ್ಯಾಹ್ನ 12.45ರ ಸುಮಾರಿಗೆ ಆಂಬ್ಯುಲೆನ್ಸ್‌ನಲ್ಲಿ ವಿಧಾನಸಭೆಯನ್ನು ತಲುಪಿದೆ. ಅಧಿಕಾರಿಗಳು ಸಹ ಪಿಪಿಇ ಕಿಟ್ ಧರಿಸಿದ್ದರು. ಅವರು ಸ್ವಲ್ಪ ಭಯಭೀತರಾಗಿದ್ದಾರೆಂದು ನಾನು ಭಾವಿಸಿದ್ದೆ. ಅದು ಸಹಜ. ನಾನು ನನ್ನ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿ ಮರಳಿ ಬಂದೆ” ಎಂದು ಶಾಸಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿಗೆ ಒಳಗಾದ ವ್ಯಕ್ತಿಗೆ ಹೊರಗೆ ಬಂದು ಮತ ಚಲಾಯಿಸಲು ಚುನಾವಣಾ ಆಯೋಗ ಹೇಗೆ ಅವಕಾಶ ನೀಡಿದೆ ಎಂದು ಬಿಜೆಪಿ ಮುಖಂಡ ಹಿತೇಶ್ ಬಾಜ್ಪೈ ಪ್ರಶ್ನಿಸಿದ್ದಾರೆ. “ಕರೋನಾ ಸೋಂಕು ಇರುವ ಶಾಸಕರಿಗೆ ವಿಧಾನಸಭೆಯ ಆವರಣಕ್ಕೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿ ನೀಡುವುದು ಸಾಂಕ್ರಾಮಿಕ ನಿಯಂತ್ರಣ ನಿಯಮಗಳ ಉಲ್ಲಂಘನೆಯಾಗಿದೆ” ಎಂದು ಬಾಜ್ಪೈ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಕಾಂಗ್ರೆಸ್ ಶಾಸಕ”ಪಂಚಾಯತ್ ಚುನಾವಣೆಯಲ್ಲಿ ಸಹ ಗೆಲ್ಲಲು ಸಾಧ್ಯವಾಗದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಸರ್ಕಾರವನ್ನು ನಡೆಸುತ್ತಿರುವ ತಮ್ಮ ಪಕ್ಷದ ಮುಖಂಡರಿಗೆ ಪ್ರಶ್ನೆ ಕೇಳಬೇಕು” ಎಂದಿದ್ದಾರೆ.

ಗುಜರಾತ್, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್‌ನಿಂದ ತಲಾ ಎರಡು ಮತ್ತು ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಿಂದ ತಲಾ ಒಂದು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಯಿತು. ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಗುಜರಾತ್‌ನಲ್ಲಿ ಒಂದು ಸ್ಥಾನ, ರಾಜಸ್ಥಾನದಲ್ಲಿ ಒಂದು ಮತ್ತು ಮಧ್ಯಪ್ರದೇಶದ ಒಂದು ಸ್ಥಾನದ ಮೇಲೆ ಕಠಿಣ ಹೋರಾಟ ನಡೆಯುತ್ತಿದೆ.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....