Homeಮುಖಪುಟರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

ರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

- Advertisement -
- Advertisement -

ಇಂದು ನಡೆಯುತ್ತಿರುವ 24 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರಾದ ಕುನಾಲ್ ಚೌಧರಿಯವರು ಕೊರೊನಾ ಸೋಂಕಿತರಾದ ಕಾರಣದಿಂದ ಭೋಪಾಲ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಕೊರೊನಾ ಪರೀಕ್ಷೆಯಲ್ಲಿ ಚೌಧರಿಯವರು ಸಾಂಕ್ರಾಮಿಕ COVID-19 ಪಾಸಿಟಿವ್‌ ಆಗಿದ್ದರು.

ಕನಿಷ್ಠ 205 ಶಾಸಕರು ಈಗಾಗಲೇ ಮತ ಚಲಾಯಿಸಿದ ನಂತರ ಅವರ ಮತದಾನದ ಸರದಿ ಬಂದಿತು. ಮುಡಿಯಿಂದ ಅಡಿವರೆಗೂ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ ಸೂಟ್) ತೊಟ್ಟಿದ್ದ ಅವರು ಕೈಯಲ್ಲಿ ಮೊಬೈಲ್ ಫೋನ್ ಹಿಡಿದುಕೊಂಡು ಮತದಾನದ ಕೋಣೆಗೆ ಕಾಲಿಟ್ಟರು.

ವೈರಸ್ ಉಸಿರಾಟದ ಹನಿಗಳಿಂದ ಹರಡುತ್ತದೆ ಎಂದು ಭಾವಿಸಿರುವ ಹಲವರು ಚೌಧರಿಯವರಿಂದ ಅಂತರ ಕಾಯ್ದುಕೊಂಡಿದ್ದರು.

ಶಾಸಕರು ಜೂನ್ 6 ರಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೂನ್‌ 10ರಂದು ಪರೀಕ್ಷೆಗೆ ಒಳಗಾದರು ಮತ್ತು ಕೊರೊನಾ ಪಾಸಿಟಿವ ವರದಿ ಜೂನ್ 12 ರಂದು ಬಂದಿತು ಎಂದು ವರದಿಯಾಗಿದೆ.

“ಪೂರ್ಣ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ನಾನು ಮಧ್ಯಾಹ್ನ 12.45ರ ಸುಮಾರಿಗೆ ಆಂಬ್ಯುಲೆನ್ಸ್‌ನಲ್ಲಿ ವಿಧಾನಸಭೆಯನ್ನು ತಲುಪಿದೆ. ಅಧಿಕಾರಿಗಳು ಸಹ ಪಿಪಿಇ ಕಿಟ್ ಧರಿಸಿದ್ದರು. ಅವರು ಸ್ವಲ್ಪ ಭಯಭೀತರಾಗಿದ್ದಾರೆಂದು ನಾನು ಭಾವಿಸಿದ್ದೆ. ಅದು ಸಹಜ. ನಾನು ನನ್ನ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿ ಮರಳಿ ಬಂದೆ” ಎಂದು ಶಾಸಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿಗೆ ಒಳಗಾದ ವ್ಯಕ್ತಿಗೆ ಹೊರಗೆ ಬಂದು ಮತ ಚಲಾಯಿಸಲು ಚುನಾವಣಾ ಆಯೋಗ ಹೇಗೆ ಅವಕಾಶ ನೀಡಿದೆ ಎಂದು ಬಿಜೆಪಿ ಮುಖಂಡ ಹಿತೇಶ್ ಬಾಜ್ಪೈ ಪ್ರಶ್ನಿಸಿದ್ದಾರೆ. “ಕರೋನಾ ಸೋಂಕು ಇರುವ ಶಾಸಕರಿಗೆ ವಿಧಾನಸಭೆಯ ಆವರಣಕ್ಕೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿ ನೀಡುವುದು ಸಾಂಕ್ರಾಮಿಕ ನಿಯಂತ್ರಣ ನಿಯಮಗಳ ಉಲ್ಲಂಘನೆಯಾಗಿದೆ” ಎಂದು ಬಾಜ್ಪೈ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಕಾಂಗ್ರೆಸ್ ಶಾಸಕ”ಪಂಚಾಯತ್ ಚುನಾವಣೆಯಲ್ಲಿ ಸಹ ಗೆಲ್ಲಲು ಸಾಧ್ಯವಾಗದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಸರ್ಕಾರವನ್ನು ನಡೆಸುತ್ತಿರುವ ತಮ್ಮ ಪಕ್ಷದ ಮುಖಂಡರಿಗೆ ಪ್ರಶ್ನೆ ಕೇಳಬೇಕು” ಎಂದಿದ್ದಾರೆ.

ಗುಜರಾತ್, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್‌ನಿಂದ ತಲಾ ಎರಡು ಮತ್ತು ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಿಂದ ತಲಾ ಒಂದು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಯಿತು. ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಗುಜರಾತ್‌ನಲ್ಲಿ ಒಂದು ಸ್ಥಾನ, ರಾಜಸ್ಥಾನದಲ್ಲಿ ಒಂದು ಮತ್ತು ಮಧ್ಯಪ್ರದೇಶದ ಒಂದು ಸ್ಥಾನದ ಮೇಲೆ ಕಠಿಣ ಹೋರಾಟ ನಡೆಯುತ್ತಿದೆ.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...