Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...