Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...