Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...