Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...