Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...