Homeಮುಖಪುಟಕೇಂದ್ರದಲ್ಲಿ ಖಾಲಿ ಇರುವ 8 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ರಾಜ್ಯಸಭಾ ಸಂಸದರ ಒತ್ತಾಯ!

ಕೇಂದ್ರದಲ್ಲಿ ಖಾಲಿ ಇರುವ 8 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ರಾಜ್ಯಸಭಾ ಸಂಸದರ ಒತ್ತಾಯ!

- Advertisement -
- Advertisement -

ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಸಂದರ್ಭದಲ್ಲಿ ಸರ್ಕಾರದ ಹುದ್ದೆಗಳನ್ನು ಖಾಲಿ ಇಡುವುದು ನ್ಯಾಯಸಮ್ಮತವಲ್ಲ. ಕೇಂದ್ರ ಸರ್ಕಾರದ ಅಡಿಯಲ್ಲಿ ಖಾಲಿ ಇರುವ ಎಂಟು ಲಕ್ಷಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮಂಗಳವಾರ ರಾಜ್ಯಸಭಾ ಸಂಸದರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್‌ ಅಧಿವೇಶನದ ವೇಳೆ ರಾಜ್ಯಸಭಾ ಸದನದಲ್ಲಿ ಶೂನ್ಯವೇಳೆಯಲ್ಲಿ ನಿರುದ್ಯೋಗ ವಿಚಾರವನ್ನು ಪ್ರಸ್ತಾಪಿಸಿದ ವೈಎಸ್ಆರ್ ಕಾಂಗ್ರೆಸ್ ಸಂಸದ ವಿ ವಿಜಯಸಾಯಿ ರೆಡ್ಡಿ, ನಿರುದ್ಯೋಗ ಹೆಚ್ಚುತ್ತಿರುವ ಸಮಯದಲ್ಲಿ ಸರ್ಕಾರಿ ವಲಯವು ಖಾಲಿ ಹುದ್ದೆಗಳಿಂದ ತುಂಬಿ ತುಳುಕುತ್ತಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಸಶಸ್ತ್ರ ಪಡೆಗಳಲ್ಲಿ ಒಂದು ಲಕ್ಷ ಮತ್ತು ರೈಲ್ವೆಯಲ್ಲಿ ಎರಡು ಲಕ್ಷ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಸುಮಾರು ಎಂಟು ಲಕ್ಷ ಹುದ್ದೆಗಳು ಖಾಲಿ ಇವೆ. “ಸರ್ಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ, ಪರೀಕ್ಷೆಯನ್ನು ನಡೆಸುತ್ತಿಲ್ಲ ಮತ್ತು ಫಲಿತಾಂಶವನ್ನು ಪ್ರಕಟಿಸುತ್ತಿಲ್ಲ” ಎಂದು ಹೇಳಿದ್ದಾರೆ.

ವಿವಿಧ ಸಚಿವಾಲಯಗಳು ನೀಡಿರುವ ಅಂಕಿಅಂಶಗಳ ಪ್ರಕಾರ, ಸಶಸ್ತ್ರ ಪಡೆಗಳಲ್ಲಿ 1,25,555 ಹುದ್ದೆಗಳು, ರೈಲ್ವೆಯಲ್ಲಿ 2,65,547 ಮತ್ತು 80,752 ಗೆಜೆಟೆಡ್ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಘಟಕಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಎಂದು ಸಿಪಿಎಂ ಸಂಸದ ವಿ ಶಿವದಾಸನ್ ಒತ್ತಾಯಿಸಿದ್ದಾರೆ.

ಎಲ್‌ಜೆಡಿ ಸಂಸದ ಎಂವಿ ಶ್ರೇಯಮ್ಸ್ ಕುಮಾರ್ ಮಾತನಾಡಿ, “ಡಿಸೆಂಬರ್‌ನಲ್ಲಿ ನಿರುದ್ಯೋಗ ದರವು 8%ಗೆ ತಲುಪಿತ್ತು. ಕೇಂದ್ರ ಸರ್ಕಾರದಲ್ಲಿ ಎಂಟು ಲಕ್ಷ ಹುದ್ದೆಗಳು ಖಾಲಿಯಾಗಿವೆ. ಮಂಜೂರಾದ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ವಲಸೆ ಹೋಗುತ್ತಿರುವ ಭಾರತೀಯರ ವಿಷಯವನ್ನು ಪ್ರಸ್ತಾಪಿಸಿದ ಡಿಎಂಕೆ ಸಂಸದ ತಿರುಚಿ ಶಿವ, “18 ಮಿಲಿಯನ್ ಜನರು ದೇಶದ ಹೊರಗೆ ವಾಸಿಸುತ್ತಿದ್ದಾರೆ. 2000 ಮತ್ತು 2020 ರ ನಡುವೆ, 10 ಮಿಲಿಯನ್ (ಒಂದು ಕೋಟಿ) ನಾಗರಿಕರು ಇತರ ದೇಶಗಳಿಗೆ ತೆರಳೀದ್ದು, ಇದರಿಂದ ಭಾರತವು ಅತಿದೊಡ್ಡ ವಲಸೆಯನ್ನು ಕಂಡಿದೆ. 2015 ಮತ್ತು 2021ರ ನಡುವೆ 8.81 ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ” ಎಂದು ಮಾಹಿತಿ ನೀಡುವ ಮೂಲಕ ಗಮನ ಸೆಳೆದರು.

“ಭಾರತದಿಂದ ವಲಸೆ ಹೋಗಿರುವ ಇವರೆಲ್ಲರೂ ಕೆಳಸ್ತರದಿಂದ ಬಂದವರು ಮತ್ತು ಕೌಶಲ್ಯರಹಿತರಲ್ಲ. ಅವರೆಲ್ಲೂ ವಿಜ್ಞಾನಿಗಳು, ಸಂಶೋಧಕರು, ವೈದ್ಯರು, ಐಟಿ ವೃತ್ತಿಪರರು ಮತ್ತು ಎಂಜಿನಿಯರ್‌ಗಳಂತಹ ನುರಿತ ಸಿಬ್ಬಂದಿಗಳು. ಅಂತಹವರ ವಲಸೆಯನ್ನು ತಡೆಯಲು ಸರ್ಕಾರವು ದೇಶದೊಳಗೆ ಅವಕಾಶಗಳನ್ನು ಸೃಷ್ಟಿಸಬೇಕು” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...