Homeಕರ್ನಾಟಕರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಬಿಜೆಪಿಯ ನಿಜವಾದ ‘ಬಿ ಟೀಮ್‌’ ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್ ಕಿತ್ತಾಟದ ನಡುವೆ ಬಿಜೆಪಿ ಮೂರು ಸ್ಥಾನಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಬಿಜೆಪಿಗೆ, ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿದೆ. ಜೆಡಿಎಸ್‌ ಮುಖಭಂಗ ಅನುಭವಿಸಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮ್‌ (46 ಮತ), ನಟ ಜಗ್ಗೇಶ್‌ (44 ಮತ), ಲಹರ್‌ ಸಿಂಗ್‌ (33 ಮತ) ಗೆದ್ದರೆ, ಕಾಂಗ್ರೆಸ್‌ನಿಂದ ಜೈರಾಂ ರಮೇಶ್‌ (46 ಮತ) ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಕುಪೇಂದ್ರ ರೆಡ್ಡಿ 30 ಮತ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿರ್ಮಲಾ ಮತ್ತು ಜೈರಾಂ ರಮೇಶ್‌ ಮೊದಲ ಪ್ರಾಶಸ್ತ್ಯದ ತಲಾ 46 ಮತಗಳನ್ನು ಪಡೆದರು. ಜಗ್ಗೇಶ್‌ ಮೊದಲ ಪ್ರಾಶಸ್ತ್ಯದ 44 ಮತ ಗಳಿಸಿದರು. ಲಹರ್‌ ಸಿಂಗ್‌ ಮೊದಲ ಪ್ರಾಶಸ್ತ್ಯದಲ್ಲಿ (33) ಒಂದು ಹೆಚ್ಚುವರಿ ಮತ, ಎರಡನೇ ಪ್ರಾಶಸ್ತ್ಯದಲ್ಲಿ ಎರಡು ಹೆಚ್ಚುವರಿ ಮತಗಳನ್ನು ಪಡೆದರು. ಈ ಎರಡೂ ಮತಗಳು ಕಾಂಗ್ರೆಸ್ ಕಡೆಯಿಂದ ಬಂದಿವೆ ಎನ್ನಲಾಗಿದೆ.

ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾಂಗ್ರೆಸ್‌ಗೆ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಬಿಜೆಪಿ ಅಭ್ಯೃರ್ಥಿಗೆ ಅಡ್ಡ ಮತದಾನ ಮಾಡಿದರು. “ನಾನು ಕಾಂಗ್ರೆಸ್‌ನಲ್ಲಿದ್ದೆ. ಕಾಂಗ್ರೆಸ್ ಪ್ರೀತಿಸುತ್ತೇನೆ” ಎಂದು ಶ್ರೀನಿವಾಸಗೌಡ ಹೇಳಿಕೆ ನೀಡಿದರು.

ಬಿಜೆಪಿ ಬಿ ಟೀಮ್ ಯಾರೆಂಬುದು ಬಯಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ. ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ ಎಂದಿದ್ದಾರೆ.

ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ನಮ್ಮ ಮನವಿಗೆ ಸ್ಪಂದಿಸಲಿಲ್ಲ: ಡಿ.ಕೆ.ಶಿವಕುಮಾರ್‌

ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆ ರೆಹಮಾನ್ ಖಾನ್ ಅವರನ್ನು ಕೂಡ ಜೆಡಿಎಸ್ ನಾಯಕರ ಮನೆಗೆ ಕಳುಹಿಸಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಇಷ್ಟಾದರೂ ಅವರು ನಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ನಾವು ಈ ಹಿಂದೆ ಹಲವು ಬಾರಿ ಅವರ ಬೆಂಬಲಕ್ಕೆ ನಿಂತಿದ್ದೇವೆ. ಕಳೆದ ಬಾರಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ನಾವು ಅವರ ಅಭ್ಯರ್ಥಿ ವಿರುದ್ಧ ಪ್ರತಿಸ್ಪರ್ಧಿ ಹಾಕಿರಲಿಲ್ಲ. ಆದರೆ ಕುಮಾರಸ್ವಾಮಿ ಅವರು, ಬಿಜೆಪಿ ಯಾವುದೇ ಅಭ್ಯರ್ಥಿ ಹಾಕಲಿಲ್ಲ ಎಂಬ ಕಾರಣಕ್ಕೆ ನಾವು ಹಾಕಲಿಲ್ಲ ಎಂದು ಹೇಳಿದ್ದಾರೆ. ಅವರು ನಮ್ಮ ಸಹಾಯ ಹಾಗೂ ಮೈತ್ರಿ ಸರ್ಕಾರ ರಚನೆ ವೇಳೆ ನಮ್ಮ ಬೇಷರತ್ ಬೆಂಬಲವನ್ನು ಸ್ಮರಿಸಲಿಲ್ಲ. ಅದು ಅವರ ಆಯ್ಕೆ ಎಂದಿದ್ದಾರೆ.

ಇನ್ನು ಮುಂದೆ ಕಾಂಗ್ರೆಸ್, ಬಿಜೆಪಿ ಜತೆ ಮೈತ್ರಿ ಅಸಾಧ್ಯ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅವರಿಗೆ ನಮ್ಮ ಬೆಂಬಲದ ಅಗತ್ಯವಿದ್ದರೆ ನಮ್ಮ ಜತೆ ಚರ್ಚೆ ಮಾಡಬೇಕಿತ್ತು. ನಾವು ಮೊದಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆದರೂ ಅವರು ನಮ್ಮ ಜತೆ ಚರ್ಚೆ ಮಾಡಲಿಲ್ಲ. ಮೈಸೂರು ಪಾಲಿಕೆ ಚುನಾವಣೆ ಸೇರಿದಂತೆ ಈ ಹಿಂದೆ ಏನೆಲ್ಲಾ ನಡೆದಿವೆ ಎಂದು ಎಲ್ಲರೂ ನೋಡಿದ್ದಾರೆ. ವಿನಾಕಾರಣ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಟೀಕಿಸುವುದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kumaraswamy is a benefactor to BJP. Always his contribution is there in BJP’s success in Karnataka. His father and he will never gain anything and not allow Congress to get anything.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...