Homeಕರ್ನಾಟಕರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಬಿಜೆಪಿಯ ನಿಜವಾದ ‘ಬಿ ಟೀಮ್‌’ ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್ ಕಿತ್ತಾಟದ ನಡುವೆ ಬಿಜೆಪಿ ಮೂರು ಸ್ಥಾನಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಬಿಜೆಪಿಗೆ, ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿದೆ. ಜೆಡಿಎಸ್‌ ಮುಖಭಂಗ ಅನುಭವಿಸಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮ್‌ (46 ಮತ), ನಟ ಜಗ್ಗೇಶ್‌ (44 ಮತ), ಲಹರ್‌ ಸಿಂಗ್‌ (33 ಮತ) ಗೆದ್ದರೆ, ಕಾಂಗ್ರೆಸ್‌ನಿಂದ ಜೈರಾಂ ರಮೇಶ್‌ (46 ಮತ) ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಕುಪೇಂದ್ರ ರೆಡ್ಡಿ 30 ಮತ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿರ್ಮಲಾ ಮತ್ತು ಜೈರಾಂ ರಮೇಶ್‌ ಮೊದಲ ಪ್ರಾಶಸ್ತ್ಯದ ತಲಾ 46 ಮತಗಳನ್ನು ಪಡೆದರು. ಜಗ್ಗೇಶ್‌ ಮೊದಲ ಪ್ರಾಶಸ್ತ್ಯದ 44 ಮತ ಗಳಿಸಿದರು. ಲಹರ್‌ ಸಿಂಗ್‌ ಮೊದಲ ಪ್ರಾಶಸ್ತ್ಯದಲ್ಲಿ (33) ಒಂದು ಹೆಚ್ಚುವರಿ ಮತ, ಎರಡನೇ ಪ್ರಾಶಸ್ತ್ಯದಲ್ಲಿ ಎರಡು ಹೆಚ್ಚುವರಿ ಮತಗಳನ್ನು ಪಡೆದರು. ಈ ಎರಡೂ ಮತಗಳು ಕಾಂಗ್ರೆಸ್ ಕಡೆಯಿಂದ ಬಂದಿವೆ ಎನ್ನಲಾಗಿದೆ.

ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾಂಗ್ರೆಸ್‌ಗೆ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಬಿಜೆಪಿ ಅಭ್ಯೃರ್ಥಿಗೆ ಅಡ್ಡ ಮತದಾನ ಮಾಡಿದರು. “ನಾನು ಕಾಂಗ್ರೆಸ್‌ನಲ್ಲಿದ್ದೆ. ಕಾಂಗ್ರೆಸ್ ಪ್ರೀತಿಸುತ್ತೇನೆ” ಎಂದು ಶ್ರೀನಿವಾಸಗೌಡ ಹೇಳಿಕೆ ನೀಡಿದರು.

ಬಿಜೆಪಿ ಬಿ ಟೀಮ್ ಯಾರೆಂಬುದು ಬಯಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ. ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ ಎಂದಿದ್ದಾರೆ.

ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ನಮ್ಮ ಮನವಿಗೆ ಸ್ಪಂದಿಸಲಿಲ್ಲ: ಡಿ.ಕೆ.ಶಿವಕುಮಾರ್‌

ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆ ರೆಹಮಾನ್ ಖಾನ್ ಅವರನ್ನು ಕೂಡ ಜೆಡಿಎಸ್ ನಾಯಕರ ಮನೆಗೆ ಕಳುಹಿಸಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಇಷ್ಟಾದರೂ ಅವರು ನಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ನಾವು ಈ ಹಿಂದೆ ಹಲವು ಬಾರಿ ಅವರ ಬೆಂಬಲಕ್ಕೆ ನಿಂತಿದ್ದೇವೆ. ಕಳೆದ ಬಾರಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ನಾವು ಅವರ ಅಭ್ಯರ್ಥಿ ವಿರುದ್ಧ ಪ್ರತಿಸ್ಪರ್ಧಿ ಹಾಕಿರಲಿಲ್ಲ. ಆದರೆ ಕುಮಾರಸ್ವಾಮಿ ಅವರು, ಬಿಜೆಪಿ ಯಾವುದೇ ಅಭ್ಯರ್ಥಿ ಹಾಕಲಿಲ್ಲ ಎಂಬ ಕಾರಣಕ್ಕೆ ನಾವು ಹಾಕಲಿಲ್ಲ ಎಂದು ಹೇಳಿದ್ದಾರೆ. ಅವರು ನಮ್ಮ ಸಹಾಯ ಹಾಗೂ ಮೈತ್ರಿ ಸರ್ಕಾರ ರಚನೆ ವೇಳೆ ನಮ್ಮ ಬೇಷರತ್ ಬೆಂಬಲವನ್ನು ಸ್ಮರಿಸಲಿಲ್ಲ. ಅದು ಅವರ ಆಯ್ಕೆ ಎಂದಿದ್ದಾರೆ.

ಇನ್ನು ಮುಂದೆ ಕಾಂಗ್ರೆಸ್, ಬಿಜೆಪಿ ಜತೆ ಮೈತ್ರಿ ಅಸಾಧ್ಯ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅವರಿಗೆ ನಮ್ಮ ಬೆಂಬಲದ ಅಗತ್ಯವಿದ್ದರೆ ನಮ್ಮ ಜತೆ ಚರ್ಚೆ ಮಾಡಬೇಕಿತ್ತು. ನಾವು ಮೊದಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆದರೂ ಅವರು ನಮ್ಮ ಜತೆ ಚರ್ಚೆ ಮಾಡಲಿಲ್ಲ. ಮೈಸೂರು ಪಾಲಿಕೆ ಚುನಾವಣೆ ಸೇರಿದಂತೆ ಈ ಹಿಂದೆ ಏನೆಲ್ಲಾ ನಡೆದಿವೆ ಎಂದು ಎಲ್ಲರೂ ನೋಡಿದ್ದಾರೆ. ವಿನಾಕಾರಣ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಟೀಕಿಸುವುದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kumaraswamy is a benefactor to BJP. Always his contribution is there in BJP’s success in Karnataka. His father and he will never gain anything and not allow Congress to get anything.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...