Homeಮುಖಪುಟಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೋಮವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿಲ್ಲ. ಸಿಂಗ್ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಅಧ್ಯಕ್ಷರು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ವಿಷಯವು ಪ್ರಸ್ತುತ ವಿಶೇಷಾಧಿಕಾರಗಳ ಸಮಿತಿಯಲ್ಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಸಭಾ ಅಧ್ಯಕ್ಷರ ನಿರ್ದೇಶನಗಳನ್ನು ಪಾಲಿಸದ ಕಾರಣ ಕಳೆದ ವರ್ಷ ಜುಲೈ 24 ರಂದು ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಜೈಲಿನಲ್ಲಿರುವ 51 ವರ್ಷದ ಎಎಪಿ ನಾಯಕನಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಶನಿವಾರ ಅನುಮತಿ ನೀಡಿದೆ. ಪ್ರಮಾಣ ವಚನಕ್ಕಾಗಿ ಮಧ್ಯಂತರ ಜಾಮೀನು ಮತ್ತು ಫೆಬ್ರವರಿ 5 ರಿಂದ 9 ರವರೆಗೆ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಸಿಂಗ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎರಡು ದಿನಗಳ ನಂತರ ನ್ಯಾಯಾಲಯದ ಆದೇಶವನ್ನು ಹೊರಡಿಸಲಾಗಿದೆ.

ಫೆಬ್ರವರಿ 7 ರಂದು ಅವರ ವಿರುದ್ಧ ದಾಖಲಾಗಿರುವ ಮತ್ತೊಂದು ಪ್ರಕರಣದ ವಿಚಾರಣೆಗಾಗಿ ಎಎಪಿ ನಾಯಕ ಸುಲ್ತಾನ್‌ಪುರಕ್ಕೆ ಹೋಗಬೇಕಾಗಿರುವುದರಿಂದ ಮಧ್ಯಂತರ ಜಾಮೀನಿನ ಮನವಿಯನ್ನು ಒತ್ತಾಯಿಸಲಾಗುವುದಿಲ್ಲ ಎಂದು ಸಿಂಗ್ ಅವರ ವಕೀಲರು ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.

ಜಾರಿ ನಿರ್ದೇಶನಾಯವು ಸಿಂಗ್ ಅವರ ಮಾರ್ಪಡಿಸಿದ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ರಾಜಕಾರಣಿಯ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಸೋಮವಾರ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿತು.

ಇದೀಗ ರದ್ದಾದ ದೆಹಲಿ ಅಬಕಾರಿ ನೀತಿಯ ಇಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ಜನವರಿ 4ರಂದು ರಾಜ್ಯಸಭಾ ಸದಸ್ಯತ್ವಕ್ಕೆ ನಾಮಪತ್ರ ಸಲ್ಲಿಸಲು ಹಾಗೂ ಜನವರಿ 10ರಂದು ಚುನಾವಣಾಧಿಕಾರಿ ಬಳಿ ತೆರಳಿ ಸದಸ್ಯತ್ವ ಪ್ರಮಾಣ ಪತ್ರ ಪಡೆಯಲು ಅನುಮತಿ ನೀಡಲಾಗಿತ್ತು.

ಕೇಂದ್ರೀಯ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿದೆ. ಈ ಪ್ರಕರಣವು ರಾಷ್ಟ್ರ ರಾಜಧಾನಿಯ ಪ್ರಮುಖ ಮದ್ಯದ ವ್ಯಾಪಾರವನ್ನು ಪುನಶ್ಚೇತನಗೊಳಿಸಲು ಅರವಿಂದ್ ಕೇಜ್ರಿವಾಲ್ ಸರ್ಕಾರದ 2021-22 ಅಬಕಾರಿ ನೀತಿಗೆ ಸಂಬಂಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣವು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್ ಅನ್ನು ಅನುಮತಿಸಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಒಲವು ತೋರಿದೆ ಎಂಬ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಎಎಪಿ ಬಲವಾಗಿ ನಿರಾಕರಿಸಿದೆ.

ಸಂಜಯ್ ಸಿಂಗ್ ಅವರ ಪಕ್ಷದ ಸಹೋದ್ಯೋಗಿ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದೇ ಪ್ರಕರಣದಲ್ಲಿ ಕಳೆದ ವರ್ಷ ಮಾರ್ಚ್‌ನಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ‘ಮೇ 10 ರೊಳಗೆ ಭಾರತೀಯ ಪಡೆಗಳು ನಿರ್ಗಮಿಸಬೇಕು..’; ಪಟ್ಟು ಸಡಿಲಿಸದ ಮಾಲ್ಡೀವ್ಸ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...