Homeಕರ್ನಾಟಕ66 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

66 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020-21ನೇ ಸಾಲಿನ ರಾಜ್ಯೋತ್ಸವ ಪ್ರಕಟಿಸಿದೆ. ಈ ವರ್ಷ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

“ಸಾರ್ವಜನಿಕರು ಮಾಡಿದ ಶಿಫಾರಸ್ಸು ಮಾಡಿದ ಹೆಸರುಗಳನ್ನೂ ಪ್ರಶಸ್ತಿ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿಯ ಮುಂದೆ ಇಡಲಾಯಿತು. ಇವುಗಳ ಸಮಗ್ರ ಪರಿಶೀಲನೆಯ ನಂತರ ಆಯ್ಕೆ ಸಮಿತಿಯ ಅಂತಿಮಗೊಳಿಸಿದ ಹೆಸರುಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗಿದೆ” ಎಂದು ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ.

“ಕನ್ನಡದ ಮೇರು ನಟ ಪುನೀತ್‌ ರಾಜ್‌ಕುಮಾರ್ ಅಕಾಲಿಕ ನಿಧನದಿಂದಾಗಿ ಪ್ರಶಸ್ತಿ ಘೋಷಣೆಯಲ್ಲಿ ವಿಳಂಬವಾಯಿತು. ಅವರ ಅಂತ್ಯಕ್ರಿಯೆಯ ಎಲ್ಲ ಪ್ರಕ್ರಿಯೆಗಳು ಮುಗಿದ ನಂತರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ವರ್ಷಕ್ಕೆ ಮಾತ್ರ ಈ ಪ್ರಶಸ್ತಿ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

****

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...