Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅವರು ಸೋಮವಾರ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ – 2021ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಈ ಘೋಷಣೆ ಮಾಡಿದ್ದಾರೆ.

ರಾಜ್ಯೋತ್ಸವ ಈ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಪ್ರಶಸ್ತಿಗೆ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ.

ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಯಾರೂ ಬಯೋ ಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿತಟ್ಟು ತೋರಿಸುವ ಅಗತ್ಯವಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಹಳ ಪ್ರತಿಷ್ಠಿತವಾದ್ದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾಡದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದಿದ್ದಾರೆ.

ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ: 60 ವರ್ಷದ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೇಷ್ಟೋ ಮಕ್ಕಳು ಹಲವು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನೀರಜ್ ಛೋಪ್ರಾ ಅವರಿಗೆ ಒಲಂಪಿಕ್ಸ್ ಚಿನ್ನದ ಪದಕ ದೊರೆತಿರುವುದು ಇಡೀ ದೇಶಕ್ಕೆ ಸ್ಫೂರ್ತಿ ದೊರೆತಿದೆ ಎಂದಿರುವ ಅವರು ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಇತರರು ಸಮಾರಂಭದಲ್ಲಿ ಹಾಜರಿದ್ದರು.

66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 10 ಸಂಘಸಂಸ್ಥೆಗಳಿಗೆ ಅಮೃತ ಮಹೋತ್ಸವ ಪ್ರಶಸ್ತಿ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

ಇದನ್ನೂ ಓದಿರಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)


ಇದನ್ನೂ ಓದಿರಿ: ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....