Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅವರು ಸೋಮವಾರ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ – 2021ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಈ ಘೋಷಣೆ ಮಾಡಿದ್ದಾರೆ.

ರಾಜ್ಯೋತ್ಸವ ಈ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಪ್ರಶಸ್ತಿಗೆ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ.

ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಯಾರೂ ಬಯೋ ಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿತಟ್ಟು ತೋರಿಸುವ ಅಗತ್ಯವಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಹಳ ಪ್ರತಿಷ್ಠಿತವಾದ್ದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾಡದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದಿದ್ದಾರೆ.

ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ: 60 ವರ್ಷದ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೇಷ್ಟೋ ಮಕ್ಕಳು ಹಲವು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನೀರಜ್ ಛೋಪ್ರಾ ಅವರಿಗೆ ಒಲಂಪಿಕ್ಸ್ ಚಿನ್ನದ ಪದಕ ದೊರೆತಿರುವುದು ಇಡೀ ದೇಶಕ್ಕೆ ಸ್ಫೂರ್ತಿ ದೊರೆತಿದೆ ಎಂದಿರುವ ಅವರು ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಇತರರು ಸಮಾರಂಭದಲ್ಲಿ ಹಾಜರಿದ್ದರು.

66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 10 ಸಂಘಸಂಸ್ಥೆಗಳಿಗೆ ಅಮೃತ ಮಹೋತ್ಸವ ಪ್ರಶಸ್ತಿ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

ಇದನ್ನೂ ಓದಿರಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)


ಇದನ್ನೂ ಓದಿರಿ: ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...