Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅವರು ಸೋಮವಾರ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ – 2021ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಈ ಘೋಷಣೆ ಮಾಡಿದ್ದಾರೆ.

ರಾಜ್ಯೋತ್ಸವ ಈ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಪ್ರಶಸ್ತಿಗೆ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ.

ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಯಾರೂ ಬಯೋ ಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿತಟ್ಟು ತೋರಿಸುವ ಅಗತ್ಯವಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಹಳ ಪ್ರತಿಷ್ಠಿತವಾದ್ದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾಡದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದಿದ್ದಾರೆ.

ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ: 60 ವರ್ಷದ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೇಷ್ಟೋ ಮಕ್ಕಳು ಹಲವು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನೀರಜ್ ಛೋಪ್ರಾ ಅವರಿಗೆ ಒಲಂಪಿಕ್ಸ್ ಚಿನ್ನದ ಪದಕ ದೊರೆತಿರುವುದು ಇಡೀ ದೇಶಕ್ಕೆ ಸ್ಫೂರ್ತಿ ದೊರೆತಿದೆ ಎಂದಿರುವ ಅವರು ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಇತರರು ಸಮಾರಂಭದಲ್ಲಿ ಹಾಜರಿದ್ದರು.

66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 10 ಸಂಘಸಂಸ್ಥೆಗಳಿಗೆ ಅಮೃತ ಮಹೋತ್ಸವ ಪ್ರಶಸ್ತಿ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

ಇದನ್ನೂ ಓದಿರಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)


ಇದನ್ನೂ ಓದಿರಿ: ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...