Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅವರು ಸೋಮವಾರ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ – 2021ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಈ ಘೋಷಣೆ ಮಾಡಿದ್ದಾರೆ.

ರಾಜ್ಯೋತ್ಸವ ಈ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಪ್ರಶಸ್ತಿಗೆ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ.

ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಯಾರೂ ಬಯೋ ಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿತಟ್ಟು ತೋರಿಸುವ ಅಗತ್ಯವಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಹಳ ಪ್ರತಿಷ್ಠಿತವಾದ್ದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾಡದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದಿದ್ದಾರೆ.

ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ: 60 ವರ್ಷದ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೇಷ್ಟೋ ಮಕ್ಕಳು ಹಲವು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನೀರಜ್ ಛೋಪ್ರಾ ಅವರಿಗೆ ಒಲಂಪಿಕ್ಸ್ ಚಿನ್ನದ ಪದಕ ದೊರೆತಿರುವುದು ಇಡೀ ದೇಶಕ್ಕೆ ಸ್ಫೂರ್ತಿ ದೊರೆತಿದೆ ಎಂದಿರುವ ಅವರು ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಇತರರು ಸಮಾರಂಭದಲ್ಲಿ ಹಾಜರಿದ್ದರು.

66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 10 ಸಂಘಸಂಸ್ಥೆಗಳಿಗೆ ಅಮೃತ ಮಹೋತ್ಸವ ಪ್ರಶಸ್ತಿ, 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

ಇದನ್ನೂ ಓದಿರಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)


ಇದನ್ನೂ ಓದಿರಿ: ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...