Homeಮುಖಪುಟಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

- Advertisement -
- Advertisement -

ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು ಎಂದು ಬಿಕೆಯು ವಕ್ತಾರ, ರೈತ ಹೋರಾಟಗಾರ ರಾಕೇಶ್ ಟಕಾಯತ್ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಇದು ನಂಜುಂಡಸ್ವಾಮಿ ಮತ್ತು ಮಹೇಂದ್ರ ಸಿಂಗ್ ಟಿಕಾಯತ್‌ರಂತಹ ನೂರಾರು ಹೋರಾಟಗಾರರ ಕರ್ಮಭೂಮಿ. ಇಪ್ಪತ್ತೈದು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸಭೆ ನಡೆದಿತ್ತು. ಇಂದು ದೆಹಲಿಯಲ್ಲಿ ಎಲ್ಲಾ ಗಡಿಗಳಲ್ಲಿ ಹೋರಾಟ ನಡೆಯುತ್ತಿದೆ. ಇದು ದೀರ್ಘ ಹೋರಾಟವಾಗಿದೆ. ಇದು ಬೇಗ ಮುಗಿಯುವುದಿಲ್ಲ. ಕರಾಳ ಕಾನೂನುಗಳು ವಾಪಸ್ ಆಗುವವರೆಗೂ ನಿಲ್ಲುವುದಿಲ್ಲ. ಇದು ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿಯೂ ನಡೆಯುತ್ತದೆ. ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಈ ಹೋರಾಟವನ್ನು ಮುಂದುವರೆಸಬೇಕೆಂದು ಮನವಿ ಮಾಡುತ್ತೇನೆ” ಎಂದರು.

ಸರ್ಕಾರ ರೈತರನ್ನು ಮೋಸ ಮಾಡಲು ಯತ್ನಿಸುತ್ತಿದೆ. ಸರ್ಕಾರ ರೈತರ ಹಾಲು, ಬೀಜ, ವಿದ್ಯುತ್ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ದೊಡ್ಡ ಕಂಪನಿಗಳು ಬಂದು ನಿಮ್ಮ ಜಮೀನನ್ನು ಗುತ್ತಿಗೆಗೆ ಪಡೆದು ಕೃಷಿ ಮಾಡುತ್ತವೆ. ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಸಾಲ ಕೊಡುತ್ತಾರೆ. ರೈತರ ಬೆಳೆಗೆ ಬೆಲೆ ಸಿಗದೆ ಸಾಲ ವಾಪಸ್ ಮಾಡದಿದ್ದರೆ ಅವರ ಭೂಮಿ ಕಿತ್ತುಕೊಳ್ಳುತ್ತಾರೆ. ರೈತ ತನ್ನದೇ ಜಮೀನಿನಲ್ಲಿ ಜೀತ ಮಾಡುವ ಕಾಲಬರಲಿದೆ. ಅದನ್ನು ತಡೆಯಲು ನಮ್ಮ ಹೋರಾಟ ನಡೆಯುತ್ತಿದೆ ಎಂದರು.

10 ವರ್ಷದ ಹಿಂದಿನ ಟ್ರ್ಯಾಕ್ಟರ್ ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತಂದಿದೆ. ದೆಹಲಿಯಲ್ಲಿ ಇಂದಿಗೂ 25-30 ಸಾವಿರ ಟ್ರ್ಯಾಕ್ಟರ್‌ಗಳು ಹೋರಾಟದಲ್ಲಿವೆ. ರೈತರು ಪದೇ ಪದೇ ಹೊಸ ವಾಹನ ಖರೀದಿಸಲು ಸಾಧ್ಯವೇ? ಅಲ್ಲದೆ ಸರ್ಕಾರ 26 ಸರ್ಕಾರಿ ಕಂಪನಿಗಳನ್ನು ಮಾರಲು ಸರ್ಕಾರ ಹೊರಟಿದೆ. ಇದು ಬಹಳ ಅಪಾಯಕಾರಿ. ಅವನ್ನು ನಾವು ಉಳಿಸಿಕೊಳ್ಳಬೇಕು. ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಲ್ಲಿ ಸುತ್ತುವರೆಯಿರಿ. ಹೋರಾಟ ಮುನ್ನಡೆಸಿ ಎಂದು ಕರೆ ನೀಡಿದರು.

ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು ಎಂದರು.

ಸರ್ಕಾರ ದ್ವಂದ್ವ ನೀತಿಯನ್ನು ಅಳವಡಿಸುತ್ತಿದೆ. ಸರ್ಕಾರಿ ನೌಕರರ ಪಿಂಚಣಿ ಕಿತ್ತುಕೊಂಡು ಎಂಪಿ ಎಮ್ಮೆಲ್ಲೆಗಳಿಗೆ ಸೌಲಭ್ಯಗಳನ್ನು ನೀಡುತ್ತಿದೆ. ಪೊಲೀಸರನ್ನು ಸರ್ಕಾರ ಶೋಷಿಸುತ್ತಿದೆ. ರೈತರ ಬೆಳೆಗಳಿಗೆ ಬೆಲೆ ನಿಗಧಿಪಡಿಸಬೇಕಾದವರು ಸರ್ಕಾರವಲ್ಲ, ಬದಲಿಗೆ ರೈತರು. ಆ ದಿನ ಬರುವಂತೆ ಹೋರಾಡೋಣ. ಯಾವಾಗ ಜೈರಾಮ್ ಮತ್ತು ಜೈಭೀಮ್ ಎಂಬ ಎರಡು ಘೋಷಣೆಗಳು ಒಟ್ಟಿಗೆ ಮೊಳಗುತ್ತವೆಯೊ ಆಗ ಜಯ ನಮ್ಮದು. ಅದಕ್ಕೆ ಕಾರ್ಮಿಕರು ಜೊತೆಗೂಡಬೇಕು ಎಂದರು.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...