Homeಮುಖಪುಟಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

- Advertisement -
- Advertisement -

ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು ಎಂದು ಬಿಕೆಯು ವಕ್ತಾರ, ರೈತ ಹೋರಾಟಗಾರ ರಾಕೇಶ್ ಟಕಾಯತ್ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಇದು ನಂಜುಂಡಸ್ವಾಮಿ ಮತ್ತು ಮಹೇಂದ್ರ ಸಿಂಗ್ ಟಿಕಾಯತ್‌ರಂತಹ ನೂರಾರು ಹೋರಾಟಗಾರರ ಕರ್ಮಭೂಮಿ. ಇಪ್ಪತ್ತೈದು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸಭೆ ನಡೆದಿತ್ತು. ಇಂದು ದೆಹಲಿಯಲ್ಲಿ ಎಲ್ಲಾ ಗಡಿಗಳಲ್ಲಿ ಹೋರಾಟ ನಡೆಯುತ್ತಿದೆ. ಇದು ದೀರ್ಘ ಹೋರಾಟವಾಗಿದೆ. ಇದು ಬೇಗ ಮುಗಿಯುವುದಿಲ್ಲ. ಕರಾಳ ಕಾನೂನುಗಳು ವಾಪಸ್ ಆಗುವವರೆಗೂ ನಿಲ್ಲುವುದಿಲ್ಲ. ಇದು ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿಯೂ ನಡೆಯುತ್ತದೆ. ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಈ ಹೋರಾಟವನ್ನು ಮುಂದುವರೆಸಬೇಕೆಂದು ಮನವಿ ಮಾಡುತ್ತೇನೆ” ಎಂದರು.

ಸರ್ಕಾರ ರೈತರನ್ನು ಮೋಸ ಮಾಡಲು ಯತ್ನಿಸುತ್ತಿದೆ. ಸರ್ಕಾರ ರೈತರ ಹಾಲು, ಬೀಜ, ವಿದ್ಯುತ್ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ದೊಡ್ಡ ಕಂಪನಿಗಳು ಬಂದು ನಿಮ್ಮ ಜಮೀನನ್ನು ಗುತ್ತಿಗೆಗೆ ಪಡೆದು ಕೃಷಿ ಮಾಡುತ್ತವೆ. ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಸಾಲ ಕೊಡುತ್ತಾರೆ. ರೈತರ ಬೆಳೆಗೆ ಬೆಲೆ ಸಿಗದೆ ಸಾಲ ವಾಪಸ್ ಮಾಡದಿದ್ದರೆ ಅವರ ಭೂಮಿ ಕಿತ್ತುಕೊಳ್ಳುತ್ತಾರೆ. ರೈತ ತನ್ನದೇ ಜಮೀನಿನಲ್ಲಿ ಜೀತ ಮಾಡುವ ಕಾಲಬರಲಿದೆ. ಅದನ್ನು ತಡೆಯಲು ನಮ್ಮ ಹೋರಾಟ ನಡೆಯುತ್ತಿದೆ ಎಂದರು.

10 ವರ್ಷದ ಹಿಂದಿನ ಟ್ರ್ಯಾಕ್ಟರ್ ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತಂದಿದೆ. ದೆಹಲಿಯಲ್ಲಿ ಇಂದಿಗೂ 25-30 ಸಾವಿರ ಟ್ರ್ಯಾಕ್ಟರ್‌ಗಳು ಹೋರಾಟದಲ್ಲಿವೆ. ರೈತರು ಪದೇ ಪದೇ ಹೊಸ ವಾಹನ ಖರೀದಿಸಲು ಸಾಧ್ಯವೇ? ಅಲ್ಲದೆ ಸರ್ಕಾರ 26 ಸರ್ಕಾರಿ ಕಂಪನಿಗಳನ್ನು ಮಾರಲು ಸರ್ಕಾರ ಹೊರಟಿದೆ. ಇದು ಬಹಳ ಅಪಾಯಕಾರಿ. ಅವನ್ನು ನಾವು ಉಳಿಸಿಕೊಳ್ಳಬೇಕು. ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಲ್ಲಿ ಸುತ್ತುವರೆಯಿರಿ. ಹೋರಾಟ ಮುನ್ನಡೆಸಿ ಎಂದು ಕರೆ ನೀಡಿದರು.

ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು ಎಂದರು.

ಸರ್ಕಾರ ದ್ವಂದ್ವ ನೀತಿಯನ್ನು ಅಳವಡಿಸುತ್ತಿದೆ. ಸರ್ಕಾರಿ ನೌಕರರ ಪಿಂಚಣಿ ಕಿತ್ತುಕೊಂಡು ಎಂಪಿ ಎಮ್ಮೆಲ್ಲೆಗಳಿಗೆ ಸೌಲಭ್ಯಗಳನ್ನು ನೀಡುತ್ತಿದೆ. ಪೊಲೀಸರನ್ನು ಸರ್ಕಾರ ಶೋಷಿಸುತ್ತಿದೆ. ರೈತರ ಬೆಳೆಗಳಿಗೆ ಬೆಲೆ ನಿಗಧಿಪಡಿಸಬೇಕಾದವರು ಸರ್ಕಾರವಲ್ಲ, ಬದಲಿಗೆ ರೈತರು. ಆ ದಿನ ಬರುವಂತೆ ಹೋರಾಡೋಣ. ಯಾವಾಗ ಜೈರಾಮ್ ಮತ್ತು ಜೈಭೀಮ್ ಎಂಬ ಎರಡು ಘೋಷಣೆಗಳು ಒಟ್ಟಿಗೆ ಮೊಳಗುತ್ತವೆಯೊ ಆಗ ಜಯ ನಮ್ಮದು. ಅದಕ್ಕೆ ಕಾರ್ಮಿಕರು ಜೊತೆಗೂಡಬೇಕು ಎಂದರು.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...