Homeಮುಖಪುಟಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

- Advertisement -
- Advertisement -

ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು ಎಂದು ಬಿಕೆಯು ವಕ್ತಾರ, ರೈತ ಹೋರಾಟಗಾರ ರಾಕೇಶ್ ಟಕಾಯತ್ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಇದು ನಂಜುಂಡಸ್ವಾಮಿ ಮತ್ತು ಮಹೇಂದ್ರ ಸಿಂಗ್ ಟಿಕಾಯತ್‌ರಂತಹ ನೂರಾರು ಹೋರಾಟಗಾರರ ಕರ್ಮಭೂಮಿ. ಇಪ್ಪತ್ತೈದು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸಭೆ ನಡೆದಿತ್ತು. ಇಂದು ದೆಹಲಿಯಲ್ಲಿ ಎಲ್ಲಾ ಗಡಿಗಳಲ್ಲಿ ಹೋರಾಟ ನಡೆಯುತ್ತಿದೆ. ಇದು ದೀರ್ಘ ಹೋರಾಟವಾಗಿದೆ. ಇದು ಬೇಗ ಮುಗಿಯುವುದಿಲ್ಲ. ಕರಾಳ ಕಾನೂನುಗಳು ವಾಪಸ್ ಆಗುವವರೆಗೂ ನಿಲ್ಲುವುದಿಲ್ಲ. ಇದು ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿಯೂ ನಡೆಯುತ್ತದೆ. ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಈ ಹೋರಾಟವನ್ನು ಮುಂದುವರೆಸಬೇಕೆಂದು ಮನವಿ ಮಾಡುತ್ತೇನೆ” ಎಂದರು.

ಸರ್ಕಾರ ರೈತರನ್ನು ಮೋಸ ಮಾಡಲು ಯತ್ನಿಸುತ್ತಿದೆ. ಸರ್ಕಾರ ರೈತರ ಹಾಲು, ಬೀಜ, ವಿದ್ಯುತ್ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ದೊಡ್ಡ ಕಂಪನಿಗಳು ಬಂದು ನಿಮ್ಮ ಜಮೀನನ್ನು ಗುತ್ತಿಗೆಗೆ ಪಡೆದು ಕೃಷಿ ಮಾಡುತ್ತವೆ. ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಸಾಲ ಕೊಡುತ್ತಾರೆ. ರೈತರ ಬೆಳೆಗೆ ಬೆಲೆ ಸಿಗದೆ ಸಾಲ ವಾಪಸ್ ಮಾಡದಿದ್ದರೆ ಅವರ ಭೂಮಿ ಕಿತ್ತುಕೊಳ್ಳುತ್ತಾರೆ. ರೈತ ತನ್ನದೇ ಜಮೀನಿನಲ್ಲಿ ಜೀತ ಮಾಡುವ ಕಾಲಬರಲಿದೆ. ಅದನ್ನು ತಡೆಯಲು ನಮ್ಮ ಹೋರಾಟ ನಡೆಯುತ್ತಿದೆ ಎಂದರು.

10 ವರ್ಷದ ಹಿಂದಿನ ಟ್ರ್ಯಾಕ್ಟರ್ ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತಂದಿದೆ. ದೆಹಲಿಯಲ್ಲಿ ಇಂದಿಗೂ 25-30 ಸಾವಿರ ಟ್ರ್ಯಾಕ್ಟರ್‌ಗಳು ಹೋರಾಟದಲ್ಲಿವೆ. ರೈತರು ಪದೇ ಪದೇ ಹೊಸ ವಾಹನ ಖರೀದಿಸಲು ಸಾಧ್ಯವೇ? ಅಲ್ಲದೆ ಸರ್ಕಾರ 26 ಸರ್ಕಾರಿ ಕಂಪನಿಗಳನ್ನು ಮಾರಲು ಸರ್ಕಾರ ಹೊರಟಿದೆ. ಇದು ಬಹಳ ಅಪಾಯಕಾರಿ. ಅವನ್ನು ನಾವು ಉಳಿಸಿಕೊಳ್ಳಬೇಕು. ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಲ್ಲಿ ಸುತ್ತುವರೆಯಿರಿ. ಹೋರಾಟ ಮುನ್ನಡೆಸಿ ಎಂದು ಕರೆ ನೀಡಿದರು.

ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು ಎಂದರು.

ಸರ್ಕಾರ ದ್ವಂದ್ವ ನೀತಿಯನ್ನು ಅಳವಡಿಸುತ್ತಿದೆ. ಸರ್ಕಾರಿ ನೌಕರರ ಪಿಂಚಣಿ ಕಿತ್ತುಕೊಂಡು ಎಂಪಿ ಎಮ್ಮೆಲ್ಲೆಗಳಿಗೆ ಸೌಲಭ್ಯಗಳನ್ನು ನೀಡುತ್ತಿದೆ. ಪೊಲೀಸರನ್ನು ಸರ್ಕಾರ ಶೋಷಿಸುತ್ತಿದೆ. ರೈತರ ಬೆಳೆಗಳಿಗೆ ಬೆಲೆ ನಿಗಧಿಪಡಿಸಬೇಕಾದವರು ಸರ್ಕಾರವಲ್ಲ, ಬದಲಿಗೆ ರೈತರು. ಆ ದಿನ ಬರುವಂತೆ ಹೋರಾಡೋಣ. ಯಾವಾಗ ಜೈರಾಮ್ ಮತ್ತು ಜೈಭೀಮ್ ಎಂಬ ಎರಡು ಘೋಷಣೆಗಳು ಒಟ್ಟಿಗೆ ಮೊಳಗುತ್ತವೆಯೊ ಆಗ ಜಯ ನಮ್ಮದು. ಅದಕ್ಕೆ ಕಾರ್ಮಿಕರು ಜೊತೆಗೂಡಬೇಕು ಎಂದರು.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....