Homeಮುಖಪುಟಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

- Advertisement -
- Advertisement -

ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು ಎಂದು ಬಿಕೆಯು ವಕ್ತಾರ, ರೈತ ಹೋರಾಟಗಾರ ರಾಕೇಶ್ ಟಕಾಯತ್ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಇದು ನಂಜುಂಡಸ್ವಾಮಿ ಮತ್ತು ಮಹೇಂದ್ರ ಸಿಂಗ್ ಟಿಕಾಯತ್‌ರಂತಹ ನೂರಾರು ಹೋರಾಟಗಾರರ ಕರ್ಮಭೂಮಿ. ಇಪ್ಪತ್ತೈದು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸಭೆ ನಡೆದಿತ್ತು. ಇಂದು ದೆಹಲಿಯಲ್ಲಿ ಎಲ್ಲಾ ಗಡಿಗಳಲ್ಲಿ ಹೋರಾಟ ನಡೆಯುತ್ತಿದೆ. ಇದು ದೀರ್ಘ ಹೋರಾಟವಾಗಿದೆ. ಇದು ಬೇಗ ಮುಗಿಯುವುದಿಲ್ಲ. ಕರಾಳ ಕಾನೂನುಗಳು ವಾಪಸ್ ಆಗುವವರೆಗೂ ನಿಲ್ಲುವುದಿಲ್ಲ. ಇದು ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿಯೂ ನಡೆಯುತ್ತದೆ. ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಈ ಹೋರಾಟವನ್ನು ಮುಂದುವರೆಸಬೇಕೆಂದು ಮನವಿ ಮಾಡುತ್ತೇನೆ” ಎಂದರು.

ಸರ್ಕಾರ ರೈತರನ್ನು ಮೋಸ ಮಾಡಲು ಯತ್ನಿಸುತ್ತಿದೆ. ಸರ್ಕಾರ ರೈತರ ಹಾಲು, ಬೀಜ, ವಿದ್ಯುತ್ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ದೊಡ್ಡ ಕಂಪನಿಗಳು ಬಂದು ನಿಮ್ಮ ಜಮೀನನ್ನು ಗುತ್ತಿಗೆಗೆ ಪಡೆದು ಕೃಷಿ ಮಾಡುತ್ತವೆ. ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಸಾಲ ಕೊಡುತ್ತಾರೆ. ರೈತರ ಬೆಳೆಗೆ ಬೆಲೆ ಸಿಗದೆ ಸಾಲ ವಾಪಸ್ ಮಾಡದಿದ್ದರೆ ಅವರ ಭೂಮಿ ಕಿತ್ತುಕೊಳ್ಳುತ್ತಾರೆ. ರೈತ ತನ್ನದೇ ಜಮೀನಿನಲ್ಲಿ ಜೀತ ಮಾಡುವ ಕಾಲಬರಲಿದೆ. ಅದನ್ನು ತಡೆಯಲು ನಮ್ಮ ಹೋರಾಟ ನಡೆಯುತ್ತಿದೆ ಎಂದರು.

10 ವರ್ಷದ ಹಿಂದಿನ ಟ್ರ್ಯಾಕ್ಟರ್ ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತಂದಿದೆ. ದೆಹಲಿಯಲ್ಲಿ ಇಂದಿಗೂ 25-30 ಸಾವಿರ ಟ್ರ್ಯಾಕ್ಟರ್‌ಗಳು ಹೋರಾಟದಲ್ಲಿವೆ. ರೈತರು ಪದೇ ಪದೇ ಹೊಸ ವಾಹನ ಖರೀದಿಸಲು ಸಾಧ್ಯವೇ? ಅಲ್ಲದೆ ಸರ್ಕಾರ 26 ಸರ್ಕಾರಿ ಕಂಪನಿಗಳನ್ನು ಮಾರಲು ಸರ್ಕಾರ ಹೊರಟಿದೆ. ಇದು ಬಹಳ ಅಪಾಯಕಾರಿ. ಅವನ್ನು ನಾವು ಉಳಿಸಿಕೊಳ್ಳಬೇಕು. ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಲ್ಲಿ ಸುತ್ತುವರೆಯಿರಿ. ಹೋರಾಟ ಮುನ್ನಡೆಸಿ ಎಂದು ಕರೆ ನೀಡಿದರು.

ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು ಎಂದರು.

ಸರ್ಕಾರ ದ್ವಂದ್ವ ನೀತಿಯನ್ನು ಅಳವಡಿಸುತ್ತಿದೆ. ಸರ್ಕಾರಿ ನೌಕರರ ಪಿಂಚಣಿ ಕಿತ್ತುಕೊಂಡು ಎಂಪಿ ಎಮ್ಮೆಲ್ಲೆಗಳಿಗೆ ಸೌಲಭ್ಯಗಳನ್ನು ನೀಡುತ್ತಿದೆ. ಪೊಲೀಸರನ್ನು ಸರ್ಕಾರ ಶೋಷಿಸುತ್ತಿದೆ. ರೈತರ ಬೆಳೆಗಳಿಗೆ ಬೆಲೆ ನಿಗಧಿಪಡಿಸಬೇಕಾದವರು ಸರ್ಕಾರವಲ್ಲ, ಬದಲಿಗೆ ರೈತರು. ಆ ದಿನ ಬರುವಂತೆ ಹೋರಾಡೋಣ. ಯಾವಾಗ ಜೈರಾಮ್ ಮತ್ತು ಜೈಭೀಮ್ ಎಂಬ ಎರಡು ಘೋಷಣೆಗಳು ಒಟ್ಟಿಗೆ ಮೊಳಗುತ್ತವೆಯೊ ಆಗ ಜಯ ನಮ್ಮದು. ಅದಕ್ಕೆ ಕಾರ್ಮಿಕರು ಜೊತೆಗೂಡಬೇಕು ಎಂದರು.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...