Homeಚಳವಳಿಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ....

ಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಗೊಳಗಾಗಿದ್ದ ದಲಿತ ಯುವಕ ಅರುಣ್ ಕುಮಾರ್‌ ವಾಲ್ಮೀಕಿ ಅವರ ಮನೆಗೆ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್ ಸೋಮವಾರ ಭೇಟಿ ನೀಡಿದ್ದರು.

ಮೃತ ಅರುಣ್ ಕುಮಾರ್‌ ವಾಲ್ಮೀಕಿ ಅವರ ಕುಟುಂಬವನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್ ಮೃತನ ಕುಟುಂಬಸ್ಥರಿಗೆ 40 ಲಕ್ಷ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಪರಿಹಾರ ನೀಡುವಾಗ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ, ಲಖಿಂಪುರ ಖೇರಿ ಮತ್ತು ಕಾನ್ಪುರದಲ್ಲಿ ಸಂತ್ರಸ್ತರಿಗೆ 40 ರಿಂದ 45 ಲಕ್ಷ ಪರಿಹಾರ ನೀಡಿದರೆ, ಆಗ್ರಾದಲ್ಲಿ ಕೇವಲ 10 ಲಕ್ಷ ರೂಪಾಯಿ ಪರಿಹಾರ ನೀಡಿದೆ” ಎಂದು ಆರೋಪಿಸಿದ್ದಾರೆ.

‘ರಾಜ್ಯ ಸರ್ಕಾರ ಅರುಣ್ ಕುಟುಂಬಕ್ಕೂ 40 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಸರ್ಕಾರ ತಾರತಮ್ಯ ಮಾಡಬಾರದು. ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು. ಜೊತೆಗೆ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆಗ್ರಾದ ಜಗದೀಶ್ ಪುರ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಆರೋಪದ ಮೇಲೆ ಠಾಣೆಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್‌ ವಾಲ್ಮೀಕಿ (30) ಎಂಬುವವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 19 ರಂದು ವಿಚಾರಣೆಯ ವೇಳೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಆಸ್ಪತ್ರೆಗೆ ತೆರಳುವಷ್ಟರಲ್ಲೇ ಸಾವನ್ನಪ್ಪಿದ್ದರು. ಪೊಲೀಸರ ಥಳಿತದಿಂದಲೇ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.

ಈ ವೇಳೆ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸದ ಬಗ್ಗೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ನಾನು ರೈತರಲ್ಲಿ ಮನವಿ ಮಾಡುತ್ತೇನೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಬಿಜೆಪಿಯನ್ನು ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೂ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...