Homeಮುಖಪುಟಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಗಾಜಿಪುರ್ ಗಡಿಯಲ್ಲಿ ಮುಳ್ಳುಬೇಲಿ ಹಾಕಿದ್ದ ಜಾಗದಲ್ಲಿಯೇ ರೈತನಾಯಕ ರಾಕೇಶ್ ಟಿಕಾಯತ್ ಹೂವಿನ ಗಿಡವೊಂದನ್ನು ನೆಡುವ ಮೂಲಕ ಗಮನ ಸೆಳೆದಿದ್ದಾರೆ.

ಸುಕ್ರವಾರ ಸಂಜೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸುರಿಸಿ, ಗುದ್ದಲಿ ಕೈಗೆತ್ತಿಕೊಂಡ ರಾಕೇಶ್ ಟಿಕಾಯತ್ ಹೂವಿನ ಗಿಡಗಳನ್ನು ನೆಡುವ ಮೂಲಕ ನಾವು ಕೃಷಿಕರು ನಮಗೆ ಅನ್ನ ಮತ್ತು ಪ್ರೀತಿ ಬೆಳೆಯುವುದಷ್ಟೇ ಗೊತ್ತು ಎಂಬ ಸಂದೇಶ ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು ಇದು ರೈತರ ಸಂಸ್ಕೃತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೆಯಾಗುತ್ತಿದೆ.

ಸರ್ಕಾರದ ಇಂಟೆರ್ನೆಟ್ ಕಡಿತ, ಮುಳ್ಳು ಸರಳುಗಳ ನೆಡುವಿಕೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗಿದೆ. ಪಾಪ್ ತಾರೆ ರಿಹಾನ್ನ, ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್, ಬಾಲಿವುಡ್ ನಟಿಯರಾದ ತಾಪ್ಸಿ ಪನ್ನು, ಸ್ವರ ಭಾಸ್ಕರ್, ಫರಾನ್ ಅಲಿ ಖಾನ್ ಮೊದಲಾದವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಈ ಕ್ರಮವನ್ನು ಕಟುಶಬ್ದಗಳಲ್ಲಿ ಖಂಡಿಸಿವೆ. ಆದರೆ ಜನವರಿ 26 ರ ತರಹದ ಮತ್ತೊಂದು ಹಿಂಸಾಚಾರವನ್ನು ತಡೆಗಟ್ಟಲು ಇದು ಅಗತ್ಯ ಎಂದು ಕೇಂದ್ರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ಫೆಬ್ರವರಿ 02 ರಂದು ಸಹ ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದ ಜಾಗದಲ್ಲಿಯೇ ರಾಕೇಶ್ ಟಿಕಾಯತ್ ಕುಳಿತು ಊಟ ಮಾಡುವ ಮೂಲಕ ತಮ್ಮ ಪ್ರತಿರೋಧ ತೋರಿದ್ದರು.

 


ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...