Homeಮುಖಪುಟಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ...

ಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಚಿದಂಬರಂ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಅಸ್ತಿತ್ವವನ್ನು ಗಳಿಸಲು ಆಡಳಿತಾರೂಢ ಬಿಜೆಪಿಯು ಕಚ್ಚತೀವಿನ ಮುಗಿದು ಹೋಗಿರುವ ಸಮಸ್ಯೆಯನ್ನು ಮುನ್ನೆಲೆಗೆ ತಂದಿದೆ, ಇದು ಶ್ರೀಲಂಕಾದಲ್ಲಿ ಕೋಟ್ಯಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಭಾರತದಲ್ಲಿ ಅನಾವಶ್ಯಕವಾಗಿ ಎತ್ತಿಕೊಂಡಿರುವುದರಿಂದ  ಶ್ರೀಲಂಕಾದಲ್ಲಿ ತಮಿಳರು ಮತ್ತು ಸಿಂಹಳೀಯರ ನಡುವೆ ಘರ್ಷಣೆಯ ಪರಿಸ್ಥಿತಿಯನ್ನು ಸೃಷ್ಟಿಸುವ ಸಾಧ್ಯತೆ ಇದೆ. ಈ ವಿಚಾರವನ್ನು ಮುನ್ನೆಲೆಗೆ ತಂದರೆ ಶ್ರೀಲಂಕಾದಲ್ಲಿ ವಾಸಿಸುವ ಲಕ್ಷಾಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗೆ ಗಂಭೀರವಾಗಿ ಹಾನಿಯಾಗುತ್ತದೆ. ಇದು ಘರ್ಷಣೆಯ ಪರಿಸ್ಥಿತಿ ಸೃಷ್ಟಿಸುತ್ತದೆ ಎಂದು ಮೋದಿ ಮತ್ತು ಅವರ ಮಂತ್ರಿಗಳಿಗೆ ಗೊತ್ತು. ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ ಮುಗಿದು ಹೋಗಿರುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಖಂಡನೀಯ ಎಂದು ಚಿದಂಬರಂ ಹೇಳಿದ್ದಾರೆ.

ಈ ವಿಷಯವನ್ನು ಬಿಜೆಪಿ ಪ್ರಸ್ತಾಪಿಸಿದ ಸಮಯವನ್ನು ಪ್ರಶ್ನಿಸಿದ ಚಿದಂಬರಂ, ಕೇಸರಿ ಪಕ್ಷವು ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ, ಚೀನೀ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಮುಗಿದ ವಿಚಾರ, 50 ವರ್ಷಗಳ ಹಿಂದೆಯೇ ಈ ಬಗ್ಗೆ ಒಪ್ಪಂದವಾಗಿತ್ತು. 2014ರಿಂದ ಮೋದಿ ಅಧಿಕಾರದಲ್ಲಿದ್ದರು, ಕಳೆದ 10 ವರ್ಷಗಳಲ್ಲಿ ಅವರು ಏಕೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ? ಚೀನಾದ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿವೆ, ನಮ್ಮ ಹಲವಾರು ಗಸ್ತು ಕೇಂದ್ರಗಳನ್ನು ನಿರ್ಬಂಧಿಸಲಾಗಿದೆ. ಇದನ್ನು ಮುಚ್ಚಿ ಹಾಕಲು ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಕಚ್ಚತೀವು ದ್ವೀಪದ ಸಮಸ್ಯೆಯನ್ನು “ಸಂಪೂರ್ಣ ಅಸಂಬದ್ಧ” ಎಂದು ಹೇಳಿದ್ದರು. ಅಲ್ಲಿ ಯಾರಾದರೂ ವಾಸಿಸುತ್ತಾರೆಯೇ? ಇದು ಸಂಪೂರ್ಣ ಅಸಂಬದ್ಧವಾಗಿದೆ. ಪ್ರಧಾನಿ ಮೋದಿ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದರು.

1974ರಲ್ಲಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸಿರುವ ಇಂದಿರಾಗಾಂಧಿ ಸರ್ಕಾರದ ನಿರ್ಧಾರವು ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಮರು ಸೇರ್ಪಡೆಗೊಳಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದರು. ಬಿಜೆಪಿ ನಾಯಕರ ಹೇಳಿಕೆಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದ ಶ್ರೀಲಂಕಾ ಈ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನು ಓದಿ: ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...