Homeಮುಖಪುಟಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ...

ಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಚಿದಂಬರಂ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಅಸ್ತಿತ್ವವನ್ನು ಗಳಿಸಲು ಆಡಳಿತಾರೂಢ ಬಿಜೆಪಿಯು ಕಚ್ಚತೀವಿನ ಮುಗಿದು ಹೋಗಿರುವ ಸಮಸ್ಯೆಯನ್ನು ಮುನ್ನೆಲೆಗೆ ತಂದಿದೆ, ಇದು ಶ್ರೀಲಂಕಾದಲ್ಲಿ ಕೋಟ್ಯಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಭಾರತದಲ್ಲಿ ಅನಾವಶ್ಯಕವಾಗಿ ಎತ್ತಿಕೊಂಡಿರುವುದರಿಂದ  ಶ್ರೀಲಂಕಾದಲ್ಲಿ ತಮಿಳರು ಮತ್ತು ಸಿಂಹಳೀಯರ ನಡುವೆ ಘರ್ಷಣೆಯ ಪರಿಸ್ಥಿತಿಯನ್ನು ಸೃಷ್ಟಿಸುವ ಸಾಧ್ಯತೆ ಇದೆ. ಈ ವಿಚಾರವನ್ನು ಮುನ್ನೆಲೆಗೆ ತಂದರೆ ಶ್ರೀಲಂಕಾದಲ್ಲಿ ವಾಸಿಸುವ ಲಕ್ಷಾಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗೆ ಗಂಭೀರವಾಗಿ ಹಾನಿಯಾಗುತ್ತದೆ. ಇದು ಘರ್ಷಣೆಯ ಪರಿಸ್ಥಿತಿ ಸೃಷ್ಟಿಸುತ್ತದೆ ಎಂದು ಮೋದಿ ಮತ್ತು ಅವರ ಮಂತ್ರಿಗಳಿಗೆ ಗೊತ್ತು. ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ ಮುಗಿದು ಹೋಗಿರುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಖಂಡನೀಯ ಎಂದು ಚಿದಂಬರಂ ಹೇಳಿದ್ದಾರೆ.

ಈ ವಿಷಯವನ್ನು ಬಿಜೆಪಿ ಪ್ರಸ್ತಾಪಿಸಿದ ಸಮಯವನ್ನು ಪ್ರಶ್ನಿಸಿದ ಚಿದಂಬರಂ, ಕೇಸರಿ ಪಕ್ಷವು ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ, ಚೀನೀ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಮುಗಿದ ವಿಚಾರ, 50 ವರ್ಷಗಳ ಹಿಂದೆಯೇ ಈ ಬಗ್ಗೆ ಒಪ್ಪಂದವಾಗಿತ್ತು. 2014ರಿಂದ ಮೋದಿ ಅಧಿಕಾರದಲ್ಲಿದ್ದರು, ಕಳೆದ 10 ವರ್ಷಗಳಲ್ಲಿ ಅವರು ಏಕೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ? ಚೀನಾದ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿವೆ, ನಮ್ಮ ಹಲವಾರು ಗಸ್ತು ಕೇಂದ್ರಗಳನ್ನು ನಿರ್ಬಂಧಿಸಲಾಗಿದೆ. ಇದನ್ನು ಮುಚ್ಚಿ ಹಾಕಲು ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಕಚ್ಚತೀವು ದ್ವೀಪದ ಸಮಸ್ಯೆಯನ್ನು “ಸಂಪೂರ್ಣ ಅಸಂಬದ್ಧ” ಎಂದು ಹೇಳಿದ್ದರು. ಅಲ್ಲಿ ಯಾರಾದರೂ ವಾಸಿಸುತ್ತಾರೆಯೇ? ಇದು ಸಂಪೂರ್ಣ ಅಸಂಬದ್ಧವಾಗಿದೆ. ಪ್ರಧಾನಿ ಮೋದಿ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದರು.

1974ರಲ್ಲಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸಿರುವ ಇಂದಿರಾಗಾಂಧಿ ಸರ್ಕಾರದ ನಿರ್ಧಾರವು ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಮರು ಸೇರ್ಪಡೆಗೊಳಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದರು. ಬಿಜೆಪಿ ನಾಯಕರ ಹೇಳಿಕೆಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದ ಶ್ರೀಲಂಕಾ ಈ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನು ಓದಿ: ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...