Homeಮುಖಪುಟಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ...

ಚೀನಾ ಭಾರತದ ಭೂಪ್ರದೇಶ ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಕಚ್ಚತೀವು ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಚಿದಂಬರಂ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಅಸ್ತಿತ್ವವನ್ನು ಗಳಿಸಲು ಆಡಳಿತಾರೂಢ ಬಿಜೆಪಿಯು ಕಚ್ಚತೀವಿನ ಮುಗಿದು ಹೋಗಿರುವ ಸಮಸ್ಯೆಯನ್ನು ಮುನ್ನೆಲೆಗೆ ತಂದಿದೆ, ಇದು ಶ್ರೀಲಂಕಾದಲ್ಲಿ ಕೋಟ್ಯಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಭಾರತದಲ್ಲಿ ಅನಾವಶ್ಯಕವಾಗಿ ಎತ್ತಿಕೊಂಡಿರುವುದರಿಂದ  ಶ್ರೀಲಂಕಾದಲ್ಲಿ ತಮಿಳರು ಮತ್ತು ಸಿಂಹಳೀಯರ ನಡುವೆ ಘರ್ಷಣೆಯ ಪರಿಸ್ಥಿತಿಯನ್ನು ಸೃಷ್ಟಿಸುವ ಸಾಧ್ಯತೆ ಇದೆ. ಈ ವಿಚಾರವನ್ನು ಮುನ್ನೆಲೆಗೆ ತಂದರೆ ಶ್ರೀಲಂಕಾದಲ್ಲಿ ವಾಸಿಸುವ ಲಕ್ಷಾಂತರ ತಮಿಳು ಮಾತನಾಡುವ ಜನರ ಹಿತಾಸಕ್ತಿಗೆ ಗಂಭೀರವಾಗಿ ಹಾನಿಯಾಗುತ್ತದೆ. ಇದು ಘರ್ಷಣೆಯ ಪರಿಸ್ಥಿತಿ ಸೃಷ್ಟಿಸುತ್ತದೆ ಎಂದು ಮೋದಿ ಮತ್ತು ಅವರ ಮಂತ್ರಿಗಳಿಗೆ ಗೊತ್ತು. ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ ಮುಗಿದು ಹೋಗಿರುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಖಂಡನೀಯ ಎಂದು ಚಿದಂಬರಂ ಹೇಳಿದ್ದಾರೆ.

ಈ ವಿಷಯವನ್ನು ಬಿಜೆಪಿ ಪ್ರಸ್ತಾಪಿಸಿದ ಸಮಯವನ್ನು ಪ್ರಶ್ನಿಸಿದ ಚಿದಂಬರಂ, ಕೇಸರಿ ಪಕ್ಷವು ಸ್ಪಷ್ಟ ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ, ಚೀನೀ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಮುಗಿದ ವಿಚಾರ, 50 ವರ್ಷಗಳ ಹಿಂದೆಯೇ ಈ ಬಗ್ಗೆ ಒಪ್ಪಂದವಾಗಿತ್ತು. 2014ರಿಂದ ಮೋದಿ ಅಧಿಕಾರದಲ್ಲಿದ್ದರು, ಕಳೆದ 10 ವರ್ಷಗಳಲ್ಲಿ ಅವರು ಏಕೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ? ಚೀನಾದ ಪಡೆಗಳು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿವೆ, ನಮ್ಮ ಹಲವಾರು ಗಸ್ತು ಕೇಂದ್ರಗಳನ್ನು ನಿರ್ಬಂಧಿಸಲಾಗಿದೆ. ಇದನ್ನು ಮುಚ್ಚಿ ಹಾಕಲು ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಕಚ್ಚತೀವು ದ್ವೀಪದ ಸಮಸ್ಯೆಯನ್ನು “ಸಂಪೂರ್ಣ ಅಸಂಬದ್ಧ” ಎಂದು ಹೇಳಿದ್ದರು. ಅಲ್ಲಿ ಯಾರಾದರೂ ವಾಸಿಸುತ್ತಾರೆಯೇ? ಇದು ಸಂಪೂರ್ಣ ಅಸಂಬದ್ಧವಾಗಿದೆ. ಪ್ರಧಾನಿ ಮೋದಿ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದರು.

1974ರಲ್ಲಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸಿರುವ ಇಂದಿರಾಗಾಂಧಿ ಸರ್ಕಾರದ ನಿರ್ಧಾರವು ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಚ್ಚತೀವು ದ್ವೀಪವನ್ನು ಭಾರತಕ್ಕೆ ಮರು ಸೇರ್ಪಡೆಗೊಳಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದರು. ಬಿಜೆಪಿ ನಾಯಕರ ಹೇಳಿಕೆಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದ ಶ್ರೀಲಂಕಾ ಈ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನು ಓದಿ: ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...