Homeಚಳವಳಿಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

ಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

- Advertisement -
- Advertisement -

ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನೂರಾರು ಉದ್ಯೋಗಿಗಳನ್ನು ಕಾನೂನುಬಾಹಿರವಾಗಿ ವಜಾಗೊಳಿಸಿದೆ. ಡಿಸೆಂಬರ್ 26, 2022 ರಿಂದ ಇಲ್ಲಿಯವರೆಗೂ ಸಂಸ್ಥೆಯ ಗೇಟಿನ ಬಳಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯಿಂದಾಗಲಿ, ಅಥವಾ ಸರ್ಕಾರದಿಂದಾಗಲಿ ಈವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇಂದು ಕಾರ್ಮಿಕರ ಸಂಘಟನೆಗಳು ರ್ಯಾಲಿ ನಡೆಸಲು ಮುಂದಾಗಿವೆ.

ಅರಿಷಿನಕುಂಟೆ ಬೈಪಾಸ್‌ನಿಂದ ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿವರೆಗೆ ಈ ರ್ಯಾಲಿ ನಡೆಯುತ್ತಿದೆ. ಕೆಲಸದಿಂದ ಕೈಬಿಟ್ಟಿರುವ ನೌಕರರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕಾರ್ಮಿಕರು, ರ್ಯಾಲಿ ನಡೆಸುವ ಮೂಲಕ ಕಾರ್ಮಿಕರು ತಮ್ಮ ಸಮಸ್ಯೆಯನ್ನು ಸಂಸ್ಥೆ ಮತ್ತು ಸರ್ಕಾರದ ಮುಂದಿಡಲು ನಿರ್ಧರಿಸಿದ್ದಾರೆ.

ಡಿಸೆಂಬರ್ ನಲ್ಲಿ ಸುಮಾರು 150 ಕಾರ್ಮಿಕರನ್ನು ವಜಾಮಾಡಲಾಗಿತ್ತು. ನಿರಂತರವಾಗಿ ಹೋರಾಟ ನಡೆಸುತ್ತಿರುವದರಿಂದ ಅವರನ್ನು ಮತ್ತೆ ಫ್ಯಾಕ್ಟರಿಯ ಆಡಳಿತವು ಕೆಲಸಕ್ಕೆ ಪುನರ್ ನೇಮಿಸಿಕೊಳ್ಳುವುದಾಗಿ ಈ ಹಿಂದಿನ ಸಭೆಯಲ್ಲಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ 30 ಕಾರ್ಮಿಕರನ್ನು ಮಾತ್ರವೇ ಪುನರ್ ನೇಮಿಸಿಕೊಂಡಿದೆ.

120 ಕಾರ್ಮಿಕರನ್ನು ಪುನರ್ ನೇಮಕ ಮಾಡಿಕೊಂಡಿಲ್ಲ ಹಾಗಾಗಿ ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ಸಂಸ್ಥೆಯ ಆಡಳಿತ ಮಂಡಳಿಯು ಬೇಕಂತಲೇ ಈ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿದೆ ಎಂದು ಆರೋಪಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ವೇತನ ಪಡೆಯದ ಕಾರ್ಮಿಕರು ಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರ್ಮಿಕರೆಲ್ಲ ಉತ್ತರ ಕರ್ನಾಟಕ ಭಾಗದಿಂದ ಬಂದಿರುವವರಿರಾಗಿದ್ದು, ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಎಐಸಿಸಿಟಿಯು ಮುಖಂಡರಾದ ವಿಜಯ್ ಅವರು ಮಾತನಾಡಿ,  “ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ, ರ್ಯಾಲಿ ನಡೆಸುತ್ತಿದ್ದೇವೆ. ಈಗಾಗಲೇ ಕಾರ್ಮಿಕ ಸಚಿವರಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಸುಮಾರು 2 ತಿಂಗಳಿನಿಂದ ಈ ಹೋರಾಟ ನಡೆಯುತ್ತಿದೆ. ಈ ವರೆಗೂ ಈ ಕಂಪನಿಯ ಆಡಳಿತ ಮಂಡಳಿಯೂ ಸರಿಯಾಗಿ ಸ್ಪಂದಿಸಿಲ್ಲ” ಎಂದು ಹೇಳಿದರು.

“ಉತ್ತರ ಕರ್ನಾಟಕದ ನಾನಾಭಾಗದಿಂದ ಬಂದಿರುವ ಕಾರ್ಮಿಕರು, ಈ ಕೆಲಸವನ್ನೇ ನಂಬಿಕೊಂಡು ಬಹಳ ವರ್ಷಗಳಿಂದ ಇಲ್ಲಿಯೇ ಇದ್ದಾರೆ. ಇದೀಗ ಕಾರಣವೇ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರ್ಮಿಕರೊಂದಿಗೆ ಇದೀಗ ಸರ್ಕಾರ ನಿಲ್ಲಬೇಕಿದ್ದು, ಸಂಸ್ಥೆಯು ಶೀಘ್ರವೇ ಅವರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು” ಎಂದು ವಿಜಯ್ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...