Homeಚಳವಳಿಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

ಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

- Advertisement -
- Advertisement -

ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನೂರಾರು ಉದ್ಯೋಗಿಗಳನ್ನು ಕಾನೂನುಬಾಹಿರವಾಗಿ ವಜಾಗೊಳಿಸಿದೆ. ಡಿಸೆಂಬರ್ 26, 2022 ರಿಂದ ಇಲ್ಲಿಯವರೆಗೂ ಸಂಸ್ಥೆಯ ಗೇಟಿನ ಬಳಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯಿಂದಾಗಲಿ, ಅಥವಾ ಸರ್ಕಾರದಿಂದಾಗಲಿ ಈವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇಂದು ಕಾರ್ಮಿಕರ ಸಂಘಟನೆಗಳು ರ್ಯಾಲಿ ನಡೆಸಲು ಮುಂದಾಗಿವೆ.

ಅರಿಷಿನಕುಂಟೆ ಬೈಪಾಸ್‌ನಿಂದ ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿವರೆಗೆ ಈ ರ್ಯಾಲಿ ನಡೆಯುತ್ತಿದೆ. ಕೆಲಸದಿಂದ ಕೈಬಿಟ್ಟಿರುವ ನೌಕರರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕಾರ್ಮಿಕರು, ರ್ಯಾಲಿ ನಡೆಸುವ ಮೂಲಕ ಕಾರ್ಮಿಕರು ತಮ್ಮ ಸಮಸ್ಯೆಯನ್ನು ಸಂಸ್ಥೆ ಮತ್ತು ಸರ್ಕಾರದ ಮುಂದಿಡಲು ನಿರ್ಧರಿಸಿದ್ದಾರೆ.

ಡಿಸೆಂಬರ್ ನಲ್ಲಿ ಸುಮಾರು 150 ಕಾರ್ಮಿಕರನ್ನು ವಜಾಮಾಡಲಾಗಿತ್ತು. ನಿರಂತರವಾಗಿ ಹೋರಾಟ ನಡೆಸುತ್ತಿರುವದರಿಂದ ಅವರನ್ನು ಮತ್ತೆ ಫ್ಯಾಕ್ಟರಿಯ ಆಡಳಿತವು ಕೆಲಸಕ್ಕೆ ಪುನರ್ ನೇಮಿಸಿಕೊಳ್ಳುವುದಾಗಿ ಈ ಹಿಂದಿನ ಸಭೆಯಲ್ಲಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ 30 ಕಾರ್ಮಿಕರನ್ನು ಮಾತ್ರವೇ ಪುನರ್ ನೇಮಿಸಿಕೊಂಡಿದೆ.

120 ಕಾರ್ಮಿಕರನ್ನು ಪುನರ್ ನೇಮಕ ಮಾಡಿಕೊಂಡಿಲ್ಲ ಹಾಗಾಗಿ ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ಸಂಸ್ಥೆಯ ಆಡಳಿತ ಮಂಡಳಿಯು ಬೇಕಂತಲೇ ಈ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿದೆ ಎಂದು ಆರೋಪಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ವೇತನ ಪಡೆಯದ ಕಾರ್ಮಿಕರು ಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರ್ಮಿಕರೆಲ್ಲ ಉತ್ತರ ಕರ್ನಾಟಕ ಭಾಗದಿಂದ ಬಂದಿರುವವರಿರಾಗಿದ್ದು, ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಎಐಸಿಸಿಟಿಯು ಮುಖಂಡರಾದ ವಿಜಯ್ ಅವರು ಮಾತನಾಡಿ,  “ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ, ರ್ಯಾಲಿ ನಡೆಸುತ್ತಿದ್ದೇವೆ. ಈಗಾಗಲೇ ಕಾರ್ಮಿಕ ಸಚಿವರಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಸುಮಾರು 2 ತಿಂಗಳಿನಿಂದ ಈ ಹೋರಾಟ ನಡೆಯುತ್ತಿದೆ. ಈ ವರೆಗೂ ಈ ಕಂಪನಿಯ ಆಡಳಿತ ಮಂಡಳಿಯೂ ಸರಿಯಾಗಿ ಸ್ಪಂದಿಸಿಲ್ಲ” ಎಂದು ಹೇಳಿದರು.

“ಉತ್ತರ ಕರ್ನಾಟಕದ ನಾನಾಭಾಗದಿಂದ ಬಂದಿರುವ ಕಾರ್ಮಿಕರು, ಈ ಕೆಲಸವನ್ನೇ ನಂಬಿಕೊಂಡು ಬಹಳ ವರ್ಷಗಳಿಂದ ಇಲ್ಲಿಯೇ ಇದ್ದಾರೆ. ಇದೀಗ ಕಾರಣವೇ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರ್ಮಿಕರೊಂದಿಗೆ ಇದೀಗ ಸರ್ಕಾರ ನಿಲ್ಲಬೇಕಿದ್ದು, ಸಂಸ್ಥೆಯು ಶೀಘ್ರವೇ ಅವರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು” ಎಂದು ವಿಜಯ್ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...