Homeಚಳವಳಿಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

ಯಜಾಕಿ ಸಂಸ್ಥೆಯಿಂದ ವಜಾಗೊಳಿಸಿದ ಕಾರ್ಮಿಕರನ್ನು ಪುನರ್ ನೇಮಕಕ್ಕೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ರ್ಯಾಲಿ

- Advertisement -
- Advertisement -

ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನೂರಾರು ಉದ್ಯೋಗಿಗಳನ್ನು ಕಾನೂನುಬಾಹಿರವಾಗಿ ವಜಾಗೊಳಿಸಿದೆ. ಡಿಸೆಂಬರ್ 26, 2022 ರಿಂದ ಇಲ್ಲಿಯವರೆಗೂ ಸಂಸ್ಥೆಯ ಗೇಟಿನ ಬಳಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯಿಂದಾಗಲಿ, ಅಥವಾ ಸರ್ಕಾರದಿಂದಾಗಲಿ ಈವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇಂದು ಕಾರ್ಮಿಕರ ಸಂಘಟನೆಗಳು ರ್ಯಾಲಿ ನಡೆಸಲು ಮುಂದಾಗಿವೆ.

ಅರಿಷಿನಕುಂಟೆ ಬೈಪಾಸ್‌ನಿಂದ ಯಜಾಕಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿವರೆಗೆ ಈ ರ್ಯಾಲಿ ನಡೆಯುತ್ತಿದೆ. ಕೆಲಸದಿಂದ ಕೈಬಿಟ್ಟಿರುವ ನೌಕರರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕಾರ್ಮಿಕರು, ರ್ಯಾಲಿ ನಡೆಸುವ ಮೂಲಕ ಕಾರ್ಮಿಕರು ತಮ್ಮ ಸಮಸ್ಯೆಯನ್ನು ಸಂಸ್ಥೆ ಮತ್ತು ಸರ್ಕಾರದ ಮುಂದಿಡಲು ನಿರ್ಧರಿಸಿದ್ದಾರೆ.

ಡಿಸೆಂಬರ್ ನಲ್ಲಿ ಸುಮಾರು 150 ಕಾರ್ಮಿಕರನ್ನು ವಜಾಮಾಡಲಾಗಿತ್ತು. ನಿರಂತರವಾಗಿ ಹೋರಾಟ ನಡೆಸುತ್ತಿರುವದರಿಂದ ಅವರನ್ನು ಮತ್ತೆ ಫ್ಯಾಕ್ಟರಿಯ ಆಡಳಿತವು ಕೆಲಸಕ್ಕೆ ಪುನರ್ ನೇಮಿಸಿಕೊಳ್ಳುವುದಾಗಿ ಈ ಹಿಂದಿನ ಸಭೆಯಲ್ಲಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ 30 ಕಾರ್ಮಿಕರನ್ನು ಮಾತ್ರವೇ ಪುನರ್ ನೇಮಿಸಿಕೊಂಡಿದೆ.

120 ಕಾರ್ಮಿಕರನ್ನು ಪುನರ್ ನೇಮಕ ಮಾಡಿಕೊಂಡಿಲ್ಲ ಹಾಗಾಗಿ ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ಸಂಸ್ಥೆಯ ಆಡಳಿತ ಮಂಡಳಿಯು ಬೇಕಂತಲೇ ಈ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿದೆ ಎಂದು ಆರೋಪಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ವೇತನ ಪಡೆಯದ ಕಾರ್ಮಿಕರು ಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರ್ಮಿಕರೆಲ್ಲ ಉತ್ತರ ಕರ್ನಾಟಕ ಭಾಗದಿಂದ ಬಂದಿರುವವರಿರಾಗಿದ್ದು, ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಎಐಸಿಸಿಟಿಯು ಮುಖಂಡರಾದ ವಿಜಯ್ ಅವರು ಮಾತನಾಡಿ,  “ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ, ರ್ಯಾಲಿ ನಡೆಸುತ್ತಿದ್ದೇವೆ. ಈಗಾಗಲೇ ಕಾರ್ಮಿಕ ಸಚಿವರಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಸುಮಾರು 2 ತಿಂಗಳಿನಿಂದ ಈ ಹೋರಾಟ ನಡೆಯುತ್ತಿದೆ. ಈ ವರೆಗೂ ಈ ಕಂಪನಿಯ ಆಡಳಿತ ಮಂಡಳಿಯೂ ಸರಿಯಾಗಿ ಸ್ಪಂದಿಸಿಲ್ಲ” ಎಂದು ಹೇಳಿದರು.

“ಉತ್ತರ ಕರ್ನಾಟಕದ ನಾನಾಭಾಗದಿಂದ ಬಂದಿರುವ ಕಾರ್ಮಿಕರು, ಈ ಕೆಲಸವನ್ನೇ ನಂಬಿಕೊಂಡು ಬಹಳ ವರ್ಷಗಳಿಂದ ಇಲ್ಲಿಯೇ ಇದ್ದಾರೆ. ಇದೀಗ ಕಾರಣವೇ ಇಲ್ಲದೆ ಕೆಲಸದಿಂದ ತಗೆದುಹಾಕಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರ್ಮಿಕರೊಂದಿಗೆ ಇದೀಗ ಸರ್ಕಾರ ನಿಲ್ಲಬೇಕಿದ್ದು, ಸಂಸ್ಥೆಯು ಶೀಘ್ರವೇ ಅವರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು” ಎಂದು ವಿಜಯ್ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...