Homeಕರೋನಾ ತಲ್ಲಣ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಸೋಮವಾರ ಪ್ರಸಿದ್ಧ ಹಿಂದಿ ಮಾತಾದ “ರಾಮ್ ಭರೋಸೆ’ (ದೇವರೇ ಗತಿ) ಬಳಸುವ ಮೂಲಕ ಉತ್ತರ ಪ್ರದೇಶದ ಗ್ರಾಮೀಣ ಮತ್ತು ಸಣ್ಣ ನಗರಗಳ ಆರೋಗ್ಯ ವ್ಯವಸ್ಥೆಯ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದೆ.

ಉತ್ತರಪ್ರದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಅಲ್ಲಿನ ಹಳ್ಳಿಗಳು ಮತ್ತು ಸಣ್ಣ ನಗರಗಳಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ ನಡೆಯುವ ಸಂದರ್ಭದಲ್ಲಿ ಮೇಲಿನಂತೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರಿದ್ದ ನ್ಯಾಯಪೀಠವು, ರಾಜ್ಯದ ಕೋವಿಡ್ ರೋಗಿಗಳಿಗೆ ಉತ್ತಮ ಆರೈಕೆ ನೀಡುವಂತೆ ಕೋರಿ ನಡೆಯುತ್ತಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಕೋರ್ಟ್‌ಗೆ ಲಭ್ಯವಾದ ಅಂಕಿಅಂಶ, ಮಾಹಿತಿಯನ್ನು ಆಧರಿಸಿ ಮಾತನಾಡಿದ ನ್ಯಾಯಾಧೀಶರು, ಉತ್ತರಪ್ರದೇಶದ ಸಣ್ಣ ನಗರಗಳು ಮತ್ತು ಹಳ್ಳಿಗಳಿಗೆ ಸಂಬಂಧಿಸಿದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆ ‘ರಾಮ್ ಭರೋಸೆ (ದೇವರ ಕರುಣೆ) ಮೇಲೆ ನಿಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಪಟ್ಟಣದ ಜಿಲ್ಲಾ ಆಸ್ಪತ್ರೆಯಿಂದ ಕೋವಿಡ್ ರೋಗಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ದೂರನ್ನು ಪರಿಶೀಲಿಸಿದ ಮೂವರು ಸದಸ್ಯರ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿದ ನ್ಯಾಯಾಲಯ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಾಲಯ ಗಮನಿಸಿದಂತೆ, ರೋಗಿ ಸಂತೋಷ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೆಸ್ಟ್ ರೂಂನಲ್ಲಿ ಅವರು ಕುಸಿದು ಬಿದ್ದ ನಂತರ ಅವರನ್ನು ಸ್ಟ್ರೆಚರ್ ಮೇಲೆ ತಂದು ಜೀವ ಉಳಿಸಲು ಪ್ರಯತ್ನಿಸಲಾಗಿತು. ಆದರೆ ರೋಗಿ ಬದುಕಿ ಉಳಿಯಲ್ಲಿಲ್ಲ. ಅವರ ದೇಹವನ್ನು “ಗುರುತಿಸಲಾಗದ” ವ್ಯಕ್ತಿಯಂತೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿಲೇವಾರಿ ಮಾಡಿದ್ದಾರೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

“ಅಂದು ರಾತ್ರಿ ಕರ್ತವ್ಯದಲ್ಲಿದ್ದ ವೈದ್ಯರ ಕಡೆಯಿಂದ ತೀವ್ರ ನಿರ್ಲಕ್ಷತೆ, ಕರ್ತವ್ಯಲೋಪ ನಡೆದಿದೆ ಎಂದು ಕೋರ್ಟ್ ಒತ್ತಿ ಹೇಳಿದೆ.

ಉತ್ತರಪ್ರದೇಶದ ವೈದ್ಯಕೀಯ ಆರೈಕೆಯ ಸ್ಥಿತಿಯ ಬಗ್ಗೆ ಅವಲೋಕನಗಳನ್ನು ಮಾಡಿದ ನ್ಯಾಯಾಲಯವು, “ಸದ್ಯದ ಆರೋಗ್ಯ ವ್ಯವಸ್ಥೆ ತುಂಬ ದುರ್ಬಲವಾಗಿದೆ. ಇದು ‘ಕಳವಳಕಾರಿ ಸಂಗತಿ’ ಎಂದಿದೆ.

“ಸಾಮಾನ್ಯ ಸಮಯದಲ್ಲಿಯೇ ನಮ್ಮ ಜನರ ವೈದ್ಯಕೀಯ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದು ಪ್ರಸ್ತುತ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದು ಬಿದ್ದಿದೆ’ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ತನ್ನ ವಿಚಾರಣೆಯಲ್ಲಿ, ನ್ಯಾಯಾಲಯವು ಪಶ್ಚಿಮ ಯುಪಿಯ ಬಿಜ್ನೋರ್ ಜಿಲ್ಲೆಯ ಒಂದು ಉದಾಹರಣೆಯನ್ನು ಸಹ ಪ್ರಸ್ತಾಪಿಸಿದೆ. ರಾಜ್ಯ ಸರ್ಕಾರದ ಸಲ್ಲಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಹೀಗೆ ಹೇಳಿದೆ: “ಬಿಜ್ನೋರ್‌ನಲ್ಲಿ ಯಾವುದೇ ಒಳ್ಳೆಯ ಆಸ್ಪತ್ರೆ ಇಲ್ಲ. ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 150 ಹಾಸಿಗೆಗಳಿವೆ. ಉಳಿದ ವೈದ್ಯಕೀಯ ಸಲಕರಣೆಗಳ ತೀವ್ರ ಕೊರತೆಯಿದೆ’ ಎಂದು ಕೋರ್ಟ್ ಹೇಳಿದೆ.

‘ಗ್ರಾಮೀಣ ಪ್ರದೇಶದ ಜನಸಂಖ್ಯೆಯನ್ನು 32 ಲಕ್ಷ ಎಂದು ಪರಿಗಣಿಸಿದರೆ, ಒಂದು ಆರೋಗ್ಯ ಕೇಂದ್ರದಲ್ಲಿ 3 ಲಕ್ಷ ಜನರ ಹೊರೆ ಇದೆ ಮತ್ತು 3 ಲಕ್ಷ ಜನರಿಗೆ ಕೇವಲ 30 ಹಾಸಿಗೆಗಳಿವೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ತೀವ್ರವಾಗಿದೆ’ ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶವು 16.19 ಲಕ್ಷ ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ ತಿಂಗಳಿನಿಂದ ದೈನಂದಿನ ಸೋಂಕುಗಳು 20,000 ಕ್ಕಿಂತ ಹೆಚ್ಚಾಗಿದೆ. ವೈದ್ಯಕೀಯ ಆಮ್ಲಜನಕ ಅಥವಾ ಇತರ ಸಂಪನ್ಮೂಲಗಳ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳುತಿದ್ದರೂ, ಸರಿಯಾದ ಆರೋಗ್ಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಕಷ್ಟಪಡುತ್ತಿದ್ದಾರೆ ಎಂದು ಮಾಧ್ಯಮಗಳು ತೊರಿಸುತ್ತಿವೆ.

ಕಳೆದ ಕೆಲವು ದಿನಗಳಿಂದ, ಗಂಗಾ ನದಿಯ ದಡದ ಸಮೀಪವಿರುವ ಹಳ್ಳಿಗಳಲ್ಲಿ ಕಂಡುಬರುವ ಶಂಕಿತ ಕೋವಿಡ್ ರೋಗಿಗಳ ಶವಗಳ ಚಿತ್ರಗಳ ಕುರಿತು ಪ್ರಸ್ತಾಪಿಸಿದ ಕೋರ್ಟ್, ಇಂತಹ ಘಟನೆಗಳನ್ನು ತಡೆಯಲು ಕೇಂದ್ರ, ಯುಪಿ ಸರ್ಕಾರ ಮತ್ತು ನೆರೆಯ ಬಿಹಾರ ಸರ್ಕಾರಕ್ಕೆ ತಿಳಿಸಿದೆ.


ಇದನ್ನೂ ಓದಿ; ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...