Homeಕರೋನಾ ತಲ್ಲಣ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಸೋಮವಾರ ಪ್ರಸಿದ್ಧ ಹಿಂದಿ ಮಾತಾದ “ರಾಮ್ ಭರೋಸೆ’ (ದೇವರೇ ಗತಿ) ಬಳಸುವ ಮೂಲಕ ಉತ್ತರ ಪ್ರದೇಶದ ಗ್ರಾಮೀಣ ಮತ್ತು ಸಣ್ಣ ನಗರಗಳ ಆರೋಗ್ಯ ವ್ಯವಸ್ಥೆಯ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದೆ.

ಉತ್ತರಪ್ರದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಅಲ್ಲಿನ ಹಳ್ಳಿಗಳು ಮತ್ತು ಸಣ್ಣ ನಗರಗಳಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ ನಡೆಯುವ ಸಂದರ್ಭದಲ್ಲಿ ಮೇಲಿನಂತೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರಿದ್ದ ನ್ಯಾಯಪೀಠವು, ರಾಜ್ಯದ ಕೋವಿಡ್ ರೋಗಿಗಳಿಗೆ ಉತ್ತಮ ಆರೈಕೆ ನೀಡುವಂತೆ ಕೋರಿ ನಡೆಯುತ್ತಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಕೋರ್ಟ್‌ಗೆ ಲಭ್ಯವಾದ ಅಂಕಿಅಂಶ, ಮಾಹಿತಿಯನ್ನು ಆಧರಿಸಿ ಮಾತನಾಡಿದ ನ್ಯಾಯಾಧೀಶರು, ಉತ್ತರಪ್ರದೇಶದ ಸಣ್ಣ ನಗರಗಳು ಮತ್ತು ಹಳ್ಳಿಗಳಿಗೆ ಸಂಬಂಧಿಸಿದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆ ‘ರಾಮ್ ಭರೋಸೆ (ದೇವರ ಕರುಣೆ) ಮೇಲೆ ನಿಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಪಟ್ಟಣದ ಜಿಲ್ಲಾ ಆಸ್ಪತ್ರೆಯಿಂದ ಕೋವಿಡ್ ರೋಗಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ದೂರನ್ನು ಪರಿಶೀಲಿಸಿದ ಮೂವರು ಸದಸ್ಯರ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿದ ನ್ಯಾಯಾಲಯ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಾಲಯ ಗಮನಿಸಿದಂತೆ, ರೋಗಿ ಸಂತೋಷ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೆಸ್ಟ್ ರೂಂನಲ್ಲಿ ಅವರು ಕುಸಿದು ಬಿದ್ದ ನಂತರ ಅವರನ್ನು ಸ್ಟ್ರೆಚರ್ ಮೇಲೆ ತಂದು ಜೀವ ಉಳಿಸಲು ಪ್ರಯತ್ನಿಸಲಾಗಿತು. ಆದರೆ ರೋಗಿ ಬದುಕಿ ಉಳಿಯಲ್ಲಿಲ್ಲ. ಅವರ ದೇಹವನ್ನು “ಗುರುತಿಸಲಾಗದ” ವ್ಯಕ್ತಿಯಂತೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿಲೇವಾರಿ ಮಾಡಿದ್ದಾರೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

“ಅಂದು ರಾತ್ರಿ ಕರ್ತವ್ಯದಲ್ಲಿದ್ದ ವೈದ್ಯರ ಕಡೆಯಿಂದ ತೀವ್ರ ನಿರ್ಲಕ್ಷತೆ, ಕರ್ತವ್ಯಲೋಪ ನಡೆದಿದೆ ಎಂದು ಕೋರ್ಟ್ ಒತ್ತಿ ಹೇಳಿದೆ.

ಉತ್ತರಪ್ರದೇಶದ ವೈದ್ಯಕೀಯ ಆರೈಕೆಯ ಸ್ಥಿತಿಯ ಬಗ್ಗೆ ಅವಲೋಕನಗಳನ್ನು ಮಾಡಿದ ನ್ಯಾಯಾಲಯವು, “ಸದ್ಯದ ಆರೋಗ್ಯ ವ್ಯವಸ್ಥೆ ತುಂಬ ದುರ್ಬಲವಾಗಿದೆ. ಇದು ‘ಕಳವಳಕಾರಿ ಸಂಗತಿ’ ಎಂದಿದೆ.

“ಸಾಮಾನ್ಯ ಸಮಯದಲ್ಲಿಯೇ ನಮ್ಮ ಜನರ ವೈದ್ಯಕೀಯ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದು ಪ್ರಸ್ತುತ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದು ಬಿದ್ದಿದೆ’ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ತನ್ನ ವಿಚಾರಣೆಯಲ್ಲಿ, ನ್ಯಾಯಾಲಯವು ಪಶ್ಚಿಮ ಯುಪಿಯ ಬಿಜ್ನೋರ್ ಜಿಲ್ಲೆಯ ಒಂದು ಉದಾಹರಣೆಯನ್ನು ಸಹ ಪ್ರಸ್ತಾಪಿಸಿದೆ. ರಾಜ್ಯ ಸರ್ಕಾರದ ಸಲ್ಲಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಹೀಗೆ ಹೇಳಿದೆ: “ಬಿಜ್ನೋರ್‌ನಲ್ಲಿ ಯಾವುದೇ ಒಳ್ಳೆಯ ಆಸ್ಪತ್ರೆ ಇಲ್ಲ. ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 150 ಹಾಸಿಗೆಗಳಿವೆ. ಉಳಿದ ವೈದ್ಯಕೀಯ ಸಲಕರಣೆಗಳ ತೀವ್ರ ಕೊರತೆಯಿದೆ’ ಎಂದು ಕೋರ್ಟ್ ಹೇಳಿದೆ.

‘ಗ್ರಾಮೀಣ ಪ್ರದೇಶದ ಜನಸಂಖ್ಯೆಯನ್ನು 32 ಲಕ್ಷ ಎಂದು ಪರಿಗಣಿಸಿದರೆ, ಒಂದು ಆರೋಗ್ಯ ಕೇಂದ್ರದಲ್ಲಿ 3 ಲಕ್ಷ ಜನರ ಹೊರೆ ಇದೆ ಮತ್ತು 3 ಲಕ್ಷ ಜನರಿಗೆ ಕೇವಲ 30 ಹಾಸಿಗೆಗಳಿವೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ತೀವ್ರವಾಗಿದೆ’ ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶವು 16.19 ಲಕ್ಷ ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ ತಿಂಗಳಿನಿಂದ ದೈನಂದಿನ ಸೋಂಕುಗಳು 20,000 ಕ್ಕಿಂತ ಹೆಚ್ಚಾಗಿದೆ. ವೈದ್ಯಕೀಯ ಆಮ್ಲಜನಕ ಅಥವಾ ಇತರ ಸಂಪನ್ಮೂಲಗಳ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳುತಿದ್ದರೂ, ಸರಿಯಾದ ಆರೋಗ್ಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಕಷ್ಟಪಡುತ್ತಿದ್ದಾರೆ ಎಂದು ಮಾಧ್ಯಮಗಳು ತೊರಿಸುತ್ತಿವೆ.

ಕಳೆದ ಕೆಲವು ದಿನಗಳಿಂದ, ಗಂಗಾ ನದಿಯ ದಡದ ಸಮೀಪವಿರುವ ಹಳ್ಳಿಗಳಲ್ಲಿ ಕಂಡುಬರುವ ಶಂಕಿತ ಕೋವಿಡ್ ರೋಗಿಗಳ ಶವಗಳ ಚಿತ್ರಗಳ ಕುರಿತು ಪ್ರಸ್ತಾಪಿಸಿದ ಕೋರ್ಟ್, ಇಂತಹ ಘಟನೆಗಳನ್ನು ತಡೆಯಲು ಕೇಂದ್ರ, ಯುಪಿ ಸರ್ಕಾರ ಮತ್ತು ನೆರೆಯ ಬಿಹಾರ ಸರ್ಕಾರಕ್ಕೆ ತಿಳಿಸಿದೆ.


ಇದನ್ನೂ ಓದಿ; ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....