Homeಕರೋನಾ ತಲ್ಲಣ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಸೋಮವಾರ ಪ್ರಸಿದ್ಧ ಹಿಂದಿ ಮಾತಾದ “ರಾಮ್ ಭರೋಸೆ’ (ದೇವರೇ ಗತಿ) ಬಳಸುವ ಮೂಲಕ ಉತ್ತರ ಪ್ರದೇಶದ ಗ್ರಾಮೀಣ ಮತ್ತು ಸಣ್ಣ ನಗರಗಳ ಆರೋಗ್ಯ ವ್ಯವಸ್ಥೆಯ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದೆ.

ಉತ್ತರಪ್ರದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಅಲ್ಲಿನ ಹಳ್ಳಿಗಳು ಮತ್ತು ಸಣ್ಣ ನಗರಗಳಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ ನಡೆಯುವ ಸಂದರ್ಭದಲ್ಲಿ ಮೇಲಿನಂತೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರಿದ್ದ ನ್ಯಾಯಪೀಠವು, ರಾಜ್ಯದ ಕೋವಿಡ್ ರೋಗಿಗಳಿಗೆ ಉತ್ತಮ ಆರೈಕೆ ನೀಡುವಂತೆ ಕೋರಿ ನಡೆಯುತ್ತಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಕೋರ್ಟ್‌ಗೆ ಲಭ್ಯವಾದ ಅಂಕಿಅಂಶ, ಮಾಹಿತಿಯನ್ನು ಆಧರಿಸಿ ಮಾತನಾಡಿದ ನ್ಯಾಯಾಧೀಶರು, ಉತ್ತರಪ್ರದೇಶದ ಸಣ್ಣ ನಗರಗಳು ಮತ್ತು ಹಳ್ಳಿಗಳಿಗೆ ಸಂಬಂಧಿಸಿದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆ ‘ರಾಮ್ ಭರೋಸೆ (ದೇವರ ಕರುಣೆ) ಮೇಲೆ ನಿಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಪಟ್ಟಣದ ಜಿಲ್ಲಾ ಆಸ್ಪತ್ರೆಯಿಂದ ಕೋವಿಡ್ ರೋಗಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ದೂರನ್ನು ಪರಿಶೀಲಿಸಿದ ಮೂವರು ಸದಸ್ಯರ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿದ ನ್ಯಾಯಾಲಯ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಾಲಯ ಗಮನಿಸಿದಂತೆ, ರೋಗಿ ಸಂತೋಷ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೆಸ್ಟ್ ರೂಂನಲ್ಲಿ ಅವರು ಕುಸಿದು ಬಿದ್ದ ನಂತರ ಅವರನ್ನು ಸ್ಟ್ರೆಚರ್ ಮೇಲೆ ತಂದು ಜೀವ ಉಳಿಸಲು ಪ್ರಯತ್ನಿಸಲಾಗಿತು. ಆದರೆ ರೋಗಿ ಬದುಕಿ ಉಳಿಯಲ್ಲಿಲ್ಲ. ಅವರ ದೇಹವನ್ನು “ಗುರುತಿಸಲಾಗದ” ವ್ಯಕ್ತಿಯಂತೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿಲೇವಾರಿ ಮಾಡಿದ್ದಾರೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

“ಅಂದು ರಾತ್ರಿ ಕರ್ತವ್ಯದಲ್ಲಿದ್ದ ವೈದ್ಯರ ಕಡೆಯಿಂದ ತೀವ್ರ ನಿರ್ಲಕ್ಷತೆ, ಕರ್ತವ್ಯಲೋಪ ನಡೆದಿದೆ ಎಂದು ಕೋರ್ಟ್ ಒತ್ತಿ ಹೇಳಿದೆ.

ಉತ್ತರಪ್ರದೇಶದ ವೈದ್ಯಕೀಯ ಆರೈಕೆಯ ಸ್ಥಿತಿಯ ಬಗ್ಗೆ ಅವಲೋಕನಗಳನ್ನು ಮಾಡಿದ ನ್ಯಾಯಾಲಯವು, “ಸದ್ಯದ ಆರೋಗ್ಯ ವ್ಯವಸ್ಥೆ ತುಂಬ ದುರ್ಬಲವಾಗಿದೆ. ಇದು ‘ಕಳವಳಕಾರಿ ಸಂಗತಿ’ ಎಂದಿದೆ.

“ಸಾಮಾನ್ಯ ಸಮಯದಲ್ಲಿಯೇ ನಮ್ಮ ಜನರ ವೈದ್ಯಕೀಯ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದು ಪ್ರಸ್ತುತ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದು ಬಿದ್ದಿದೆ’ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ತನ್ನ ವಿಚಾರಣೆಯಲ್ಲಿ, ನ್ಯಾಯಾಲಯವು ಪಶ್ಚಿಮ ಯುಪಿಯ ಬಿಜ್ನೋರ್ ಜಿಲ್ಲೆಯ ಒಂದು ಉದಾಹರಣೆಯನ್ನು ಸಹ ಪ್ರಸ್ತಾಪಿಸಿದೆ. ರಾಜ್ಯ ಸರ್ಕಾರದ ಸಲ್ಲಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಹೀಗೆ ಹೇಳಿದೆ: “ಬಿಜ್ನೋರ್‌ನಲ್ಲಿ ಯಾವುದೇ ಒಳ್ಳೆಯ ಆಸ್ಪತ್ರೆ ಇಲ್ಲ. ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 150 ಹಾಸಿಗೆಗಳಿವೆ. ಉಳಿದ ವೈದ್ಯಕೀಯ ಸಲಕರಣೆಗಳ ತೀವ್ರ ಕೊರತೆಯಿದೆ’ ಎಂದು ಕೋರ್ಟ್ ಹೇಳಿದೆ.

‘ಗ್ರಾಮೀಣ ಪ್ರದೇಶದ ಜನಸಂಖ್ಯೆಯನ್ನು 32 ಲಕ್ಷ ಎಂದು ಪರಿಗಣಿಸಿದರೆ, ಒಂದು ಆರೋಗ್ಯ ಕೇಂದ್ರದಲ್ಲಿ 3 ಲಕ್ಷ ಜನರ ಹೊರೆ ಇದೆ ಮತ್ತು 3 ಲಕ್ಷ ಜನರಿಗೆ ಕೇವಲ 30 ಹಾಸಿಗೆಗಳಿವೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ತೀವ್ರವಾಗಿದೆ’ ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶವು 16.19 ಲಕ್ಷ ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ ತಿಂಗಳಿನಿಂದ ದೈನಂದಿನ ಸೋಂಕುಗಳು 20,000 ಕ್ಕಿಂತ ಹೆಚ್ಚಾಗಿದೆ. ವೈದ್ಯಕೀಯ ಆಮ್ಲಜನಕ ಅಥವಾ ಇತರ ಸಂಪನ್ಮೂಲಗಳ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳುತಿದ್ದರೂ, ಸರಿಯಾದ ಆರೋಗ್ಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಕಷ್ಟಪಡುತ್ತಿದ್ದಾರೆ ಎಂದು ಮಾಧ್ಯಮಗಳು ತೊರಿಸುತ್ತಿವೆ.

ಕಳೆದ ಕೆಲವು ದಿನಗಳಿಂದ, ಗಂಗಾ ನದಿಯ ದಡದ ಸಮೀಪವಿರುವ ಹಳ್ಳಿಗಳಲ್ಲಿ ಕಂಡುಬರುವ ಶಂಕಿತ ಕೋವಿಡ್ ರೋಗಿಗಳ ಶವಗಳ ಚಿತ್ರಗಳ ಕುರಿತು ಪ್ರಸ್ತಾಪಿಸಿದ ಕೋರ್ಟ್, ಇಂತಹ ಘಟನೆಗಳನ್ನು ತಡೆಯಲು ಕೇಂದ್ರ, ಯುಪಿ ಸರ್ಕಾರ ಮತ್ತು ನೆರೆಯ ಬಿಹಾರ ಸರ್ಕಾರಕ್ಕೆ ತಿಳಿಸಿದೆ.


ಇದನ್ನೂ ಓದಿ; ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...