Homeಮುಖಪುಟನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ - ಸ್ತ್ರೀ...

ನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ – ಸ್ತ್ರೀ ವಿರೋಧಿ ಹೇಳಿಕೆ ನೀಡಿದ ನಟ ಚಿರಂಜೀವಿ

- Advertisement -
- Advertisement -

ತೆಲುಗು ಚಿತ್ರರಂಗದ ಮೆಗಾಸ್ಟಾರ್, ನಟ ಚಿರಂಜೀವಿ, ತನ್ನ ಮಗ ರಾಮ್ ಚರಣ್‌ಗೆ ಹೆಣ್ಣು ಮಗು ಜನಿಸಬಹುದೆಂಬ ಬಗ್ಗೆ ಭಯವಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಅಸೂಕ್ಷ್ಮ ಹೇಳಿಕೆ ನೀಡಿರುವ ಅವರ ಈ ಹೇಳಿಕೆ “ಸ್ತ್ರೀ ವಿರೋಧಿ” ಹೇಳಿಕೆಯಾಗಿದೆ ಎಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನನ್ನ ಮಗ ರಾಮ್ ಚರಣ್‌

ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ತನ್ನ ಮಗ ರಾಮ್‌ಚರಣ್‌ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು ಎಂದು ಹೇಳಿರುವ ಅವರು, ತಮ್ಮ ಪರಂಪರೆಯನ್ನು ಮುಂದುವರಿಸಲು ಮೊಮ್ಮಗ ಬೇಕು, ಹೆಣ್ಣು ಮಕ್ಕಳು ಮನೆಯಲ್ಲಿರುವಾಗ “ಮಹಿಳೆಯರ ಹಾಸ್ಟೆಲ್”ನಲ್ಲಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಮಗ ರಾಮ್ ಚರಣ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್‌ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್‌ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್‌ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಎಂದು ಕೇಳಿದ್ದಾರೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು. ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.

ಚಿರಂಜೀವಿ ಅವರ ಮಗ ರಾಮ್‌ಚರಣ್‌ ಮತ್ತು ಸೊಸೆ ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಅವರಿಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.

ಇದನ್ನೂಓದಿ:  ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...