Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...