Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...