Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....