Homeಮುಖಪುಟ'ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ': ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

- Advertisement -
- Advertisement -

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ.

ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು ಉಳಿದಿದೆ?” ಬರೆದುಕೊಂಡಿದ್ದಾರೆ.

“ಭಾರತದ ಹೊರಗಿನ ಜನರು ಭಾರತದಲ್ಲಿ ಮುಖ್ಯವಾಹಿನಿಯಲ್ಲಿರುವ ಮತ್ತು ಭಾರತೀಯ ಸೆಲೆಬ್ರಿಟಿಗಳು ಹೆಚ್ಚು ಪ್ರತಿಪಾದಿಸುವ ರಾಜಕೀಯದ ಕೀಳು ಮಟ್ಟವನ್ನು ಗ್ರಹಿಸಿಲೂ ಸಾಧ್ಯವಿಲ್ಲ” ಎಂದು ಪತ್ರಕರ್ತೆ ಮತ್ತು ಅಂಕಣಗಾರ್ತಿ ಸಾರಾ ಅಥರ್ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ತಜ್ಞೆ ಮತ್ತು ಹೋರಾಟಗಾರ್ತಿ ರಾಖಿ ತ್ರಿಪಾಠಿ ಅವರು ರಾಮ್‌ ಗೋಪಾಲ್ ವರ್ಮಾ ಅವರ ಸಹಾನುಭೂತಿಯ ಕೊರತೆಯನ್ನು ಖಂಡಿಸಿದ್ದು, “ದೀಪಾವಳಿ ಅಂದರೆ ಭರವಸೆ, ಬೆಳಕು ಮತ್ತು ಹೊಸತನ. ಗಾಝಾ ಅಂದರೆ ಬದುಕಿನ ಹೋರಾಟ. ಈ ಮನುಷ್ಯನಿಗೆ ಆಚರಣೆ ಮತ್ತು ವಿನಾಶದ ನಡುವಿನ ವ್ಯತ್ಯಾಸ ತಿಳಿದಿಲ್ಲ, ಈತ ಕ್ರೂರಿ” ಎಂದು ಕಿಡಿಕಾರಿದ್ದಾರೆ.

ವರ್ಮಾ ಅವರ ಹೇಳಿಕೆ ನಿಜವಾಗಿಯೂ ಅಸಹ್ಯಕರ ಸಮಾಜದ ಪ್ರತಿಬಿಂಬ ಎಂದ ಅಲಿ ಅಸಾದ್, “ಇವರು ಝಿಯೋನಿಸ್ಟ್ ಗುಲಾಮರಾಗಲು ಮುಂದಾಗುವ ಜನರು, ಇಸ್ರೇಲಿಗಳಿಗಿಂತ ಕೆಟ್ಟವರಾಗಿರುವ ವಿಶ್ವದ ಏಕೈಕ ಜನರು” ಎಂದಿದ್ದಾರೆ.

ವರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ದೀಕ್ಷಾ ಕಂಡ್ಪಾಲ್ ಎಂಬ ಎಕ್ಸ್‌ ಬಳಕೆದಾರರೊಬ್ಬರು, “ದೀಪಾವಳಿ ಎಂದರೆ ಶ್ರೀರಾಮನು ತನ್ನ ರಾಜ್ಯಕ್ಕೆ ಮರಳುವುದನ್ನು ನಾವು ಆಚರಿಸುವ ಹಬ್ಬ. ಇದು ಬೆಳಕು, ಸಮೃದ್ಧಿ, ಸಕಾರಾತ್ಮಕತೆಯ ಹಬ್ಬ. ನೀವು ಗಾಝಾದಲ್ಲಿ ಪ್ರತಿದಿನ ದೀಪಾವಳಿ ಎಂದು ಹೇಳುವ ಮೂಲಕ ದೀಪಾವಳಿಯನ್ನು ಸಾವು ಮತ್ತು ಯುದ್ಧದೊಂದಿಗೆ ಸಂಯೋಜಿಸುತ್ತಿದ್ದೀರಿ” ಎಂದು ಹೇಳಿದ್ದಾರೆ.

ಮುಂದುವರಿದು, “ದೀಪಾವಳಿಯಂದು ನಾವು ಸಾವನ್ನು ಸಂಭ್ರಮಿಸುತ್ತೇವೆಯೇ? ಈ ರೀತಿಯ ಪೋಸ್ಟ್‌ಗಳಿಂದಾಗಿ ನಾವು ಭಾರತೀಯರು ಮತ್ತು ಹಿಂದೂಗಳು ಹೆಚ್ಚು ದ್ವೇಷವನ್ನು ಪಡೆಯುತ್ತೇವೆ. ವಿದೇಶಗಳಲ್ಲಿ ಜನರು ಕಿರುಕುಳಕ್ಕೊಳಗಾಗುವ ನೈಜ ಉದಾಹರಣೆಗಳಿವೆ. ಇದನ್ನು ಅಳಿಸಿ” ಎಂದು ಬರೆದುಕೊಂಡಿದ್ದಾರೆ.

ಗಾಝಾದ ಕದನ ವಿರಾಮವನ್ನು ಮುರಿದಿರುವ ಇಸ್ರೇಲ್ ಅಮಾಯಕರ ಹತ್ಯೆಯನ್ನು ಮುಂದುವರಿಸಿರುವ ನಡುವೆ ರಾಮ್ ಗೋಪಾಲ್ ವರ್ಮಾ ವಿಕೃತ ಪೋಸ್ಟ್ ಹಾಕಿದ್ದಾರೆ.

ವರ್ಮಾ ಅವರ ದ್ವೇಷ ಹರಡುವ ಮತ್ತು ಸಾಮೂಹಿಕ ಹತ್ಯೆಗಳನ್ನು ಅಣಕಿಸುವ ಪೋಸ್ಟ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಎಕ್ಸ್‌ ಅನ್ನು ಒತ್ತಾಯಿಸಿದ್ದಾರೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವರ್ಮಾ ಹಾಕಿರುವ ಪೋಸ್ಟ್ ಈಗಾಲೂ ಇದೆ. ಅವರು ಇದುವರೆಗೆ ಪೋಸ್ಟ್ ಅಳಿಸಿಲ್ಲ, ಕ್ಷಮೆಯೂ ಕೇಳಿಲ್ಲ.

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...