Homeಮುಖಪುಟಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

ಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ಭೂಮಿ ಖರೀದಿ ವಿವಾದ ಕಳೆದ ವಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ ಹೆಚ್ಚಿನ ದರಕ್ಕೆ ಭೂಮಿಯನ್ನು ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ ಮಾತ್ರ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದು ಆರೋಪ ಮಾಡಿದವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಹೇಳಿದೆ.

ಸುಮಾರು 2 ಕೋಟಿ ಮೌಲ್ಯದ ಭೂಮಿಯನ್ನು 18 ಕೋಟಿ ಮೊತ್ತಕ್ಕೆ ಟ್ರಸ್ಟ್‌ ಖರೀದಿಸಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ. ವಿರೋಧಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ನೇಮಕಮಾಡಿರುವ ರಾಮಜನ್ಮಭೂಮಿ ದೇವಸ್ಥಾನ ಟ್ರಸ್ಟ್‌ ಭೂ ಖರೀದಿ ಹಗರಣದ ಆರೋಪಗಳನ್ನು ಅಲ್ಲಗಳೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯದರ್ಶಿ ಚರಪಂತ್ ರಾಯ್ ಅವರು ಭೂ ಖರೀದಿ ಪಾರದರ್ಶಕವಾಗಿ ನಡೆದಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಜಾಗವನ್ನು ಖರೀದಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ವಿವಾದವನ್ನು ಹುಟ್ಟುಹಾಕುತ್ತಿವೆ. ಆರೋಪಗಳು ಸತ್ಯಕ್ಕೆ ದೂರವಾಗಿವೆ. ಭೂ ಖರೀದಿಯ ಎಲ್ಲಾ ದಾಖಲೆಗಳನ್ನು ಬಹಿರಂಗಗೊಳಿಸಲು ಟ್ರಸ್ಟ್‌ ಸಿದ್ಧವಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ರಾಮ ಜನ್ಮಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಅನುಮಾನವಿರುವವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ  ಟೆಂಪಲ್‌ ಟ್ರಸ್ಟ್‌ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಟ್ರಸ್ಟ್‌ ಆಗಿದ್ದು ಕೋರ್ಟ್‌ಗೆ ಉತ್ತರಿಸಲಿದೆ. ಒಂದು ವೇಳೆ ಆರೋಪ ಮಾಡುವವರಲ್ಲಿ ಸಾಕ್ಷಿಯಿದ್ದರೆ ಕಾನೂನಿನ ಮೂಲಕ ಆರೋಪವನ್ನು ಸಾಬೀತುಪಡಿಸಲಿ ಎಂದು ಟ್ರಸ್ಟ್‌ ವಿರೋಧಪಕ್ಷಗಳಿಗೆ ಸವಾಲು ಹಾಕಿದೆ.

ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ , ಸಮಾಜವಾದಿ ಪಕ್ಷ ಸೇರಿದಂತೆ ಇನ್ನೂ ಅನೇಕರು ರಾಮ ಜನ್ಮ ಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ರಾಮ ಜನ್ಮಭೂಮಿ ಟ್ರಸ್ಟ್‌ ಇವರೆಲ್ಲರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕಾ ಗಾಂಧಿ, ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಲು ನಿರ್ಧರಿಸಿದೆ. ಧಾರ್ಮಿಕ ನಂಬಿಕೆಗಳನ್ನು ಕದಡುವ ಪ್ರಯತ್ನ, ಐಪಿಸಿ ಸೆಕ್ಷನ್ 153B (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷವನ್ನು ಹರಡುವ ಕೃತ್ಯ), ಸುಳ್ಳು ದಾಖಲೆಗಳ ನೀಡಿಕೆ ಸೇರಿದಂತೆ ವಿವಿಧ ಆರೋಪಗಳಡಿಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ ಪ್ರಕರಣಗಳನ್ನು ದಾಖಲಿಸಲು ಮುಂದಾಗಿದೆ.

ವಿಶ್ವ ಹಿಂದು ಪರಿಷತ್ ಕೂಡ ರಾಮ ಮಂದಿರ ಭೂ ಖರೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದೆ. ಆರೋಪ ಮಾಡಿದವರು ನ್ಯಾಯಾಲಯದ ಮೆಟ್ಟಿಲೇರದ ಕಾರಣ ಟೆಂಪಲ್ ಟ್ರಸ್ಟ್‌ ಕಾನೂನು ಸಮರಕ್ಕೆ ಸಿದ್ಧವಾಗಿದೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕುರಿತು ಅಪನಂಬಿಕೆಯನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಹಾಗಾಗಿ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಟ್ರಸ್ಟ್‌ನ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...