Homeಮುಖಪುಟಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

ಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ಭೂಮಿ ಖರೀದಿ ವಿವಾದ ಕಳೆದ ವಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ ಹೆಚ್ಚಿನ ದರಕ್ಕೆ ಭೂಮಿಯನ್ನು ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ ಮಾತ್ರ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದು ಆರೋಪ ಮಾಡಿದವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಹೇಳಿದೆ.

ಸುಮಾರು 2 ಕೋಟಿ ಮೌಲ್ಯದ ಭೂಮಿಯನ್ನು 18 ಕೋಟಿ ಮೊತ್ತಕ್ಕೆ ಟ್ರಸ್ಟ್‌ ಖರೀದಿಸಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ. ವಿರೋಧಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ನೇಮಕಮಾಡಿರುವ ರಾಮಜನ್ಮಭೂಮಿ ದೇವಸ್ಥಾನ ಟ್ರಸ್ಟ್‌ ಭೂ ಖರೀದಿ ಹಗರಣದ ಆರೋಪಗಳನ್ನು ಅಲ್ಲಗಳೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯದರ್ಶಿ ಚರಪಂತ್ ರಾಯ್ ಅವರು ಭೂ ಖರೀದಿ ಪಾರದರ್ಶಕವಾಗಿ ನಡೆದಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಜಾಗವನ್ನು ಖರೀದಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ವಿವಾದವನ್ನು ಹುಟ್ಟುಹಾಕುತ್ತಿವೆ. ಆರೋಪಗಳು ಸತ್ಯಕ್ಕೆ ದೂರವಾಗಿವೆ. ಭೂ ಖರೀದಿಯ ಎಲ್ಲಾ ದಾಖಲೆಗಳನ್ನು ಬಹಿರಂಗಗೊಳಿಸಲು ಟ್ರಸ್ಟ್‌ ಸಿದ್ಧವಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ರಾಮ ಜನ್ಮಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಅನುಮಾನವಿರುವವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ  ಟೆಂಪಲ್‌ ಟ್ರಸ್ಟ್‌ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಟ್ರಸ್ಟ್‌ ಆಗಿದ್ದು ಕೋರ್ಟ್‌ಗೆ ಉತ್ತರಿಸಲಿದೆ. ಒಂದು ವೇಳೆ ಆರೋಪ ಮಾಡುವವರಲ್ಲಿ ಸಾಕ್ಷಿಯಿದ್ದರೆ ಕಾನೂನಿನ ಮೂಲಕ ಆರೋಪವನ್ನು ಸಾಬೀತುಪಡಿಸಲಿ ಎಂದು ಟ್ರಸ್ಟ್‌ ವಿರೋಧಪಕ್ಷಗಳಿಗೆ ಸವಾಲು ಹಾಕಿದೆ.

ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ , ಸಮಾಜವಾದಿ ಪಕ್ಷ ಸೇರಿದಂತೆ ಇನ್ನೂ ಅನೇಕರು ರಾಮ ಜನ್ಮ ಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ರಾಮ ಜನ್ಮಭೂಮಿ ಟ್ರಸ್ಟ್‌ ಇವರೆಲ್ಲರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕಾ ಗಾಂಧಿ, ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಲು ನಿರ್ಧರಿಸಿದೆ. ಧಾರ್ಮಿಕ ನಂಬಿಕೆಗಳನ್ನು ಕದಡುವ ಪ್ರಯತ್ನ, ಐಪಿಸಿ ಸೆಕ್ಷನ್ 153B (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷವನ್ನು ಹರಡುವ ಕೃತ್ಯ), ಸುಳ್ಳು ದಾಖಲೆಗಳ ನೀಡಿಕೆ ಸೇರಿದಂತೆ ವಿವಿಧ ಆರೋಪಗಳಡಿಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ ಪ್ರಕರಣಗಳನ್ನು ದಾಖಲಿಸಲು ಮುಂದಾಗಿದೆ.

ವಿಶ್ವ ಹಿಂದು ಪರಿಷತ್ ಕೂಡ ರಾಮ ಮಂದಿರ ಭೂ ಖರೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದೆ. ಆರೋಪ ಮಾಡಿದವರು ನ್ಯಾಯಾಲಯದ ಮೆಟ್ಟಿಲೇರದ ಕಾರಣ ಟೆಂಪಲ್ ಟ್ರಸ್ಟ್‌ ಕಾನೂನು ಸಮರಕ್ಕೆ ಸಿದ್ಧವಾಗಿದೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕುರಿತು ಅಪನಂಬಿಕೆಯನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಹಾಗಾಗಿ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಟ್ರಸ್ಟ್‌ನ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...