Homeಮುಖಪುಟರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಡ್ವಾಣಿ!

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಡ್ವಾಣಿ!

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾನ ಕಾರ್ಯಕ್ರಮ ಇಂದು ನಡೆದಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಕಳೆದ ತಿಂಗಳು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣ ಸಮಾರಂಭದಲ್ಲಿ ಭಾಗವಹಿಸದಂತೆ ಕೇಳಿಕೊಂಡಿತ್ತು. ಅವರಿಬ್ಬರಿಗೂ ವಯಸ್ಸಾಗಿರುವುದನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದ್ದು, ಆ ಮನವಿಯನ್ನು ಅವರಿಬ್ಬರೂ ಸ್ವೀಕರಿಸಿದ್ದಾರೆ ಎಂದು ಹೇಳಿದ್ದರು.

ಇದಾದ ಬಳಿಕ ವಿಶ್ವ ಹಿಂದೂ ಪರಿಷತ್ ನಾಯಕರು, ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅಡ್ವಾಣಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದರು. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಡ್ವಾಣಿ ಅವರಿಗೆ ಅಗತ್ಯವಿರುವ ವೈದ್ಯಕೀಯ ಸೌಕರ್ಯದ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದು ವಿಶ‍್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದರು.  ಅಡ್ವಾಣಿ ಹಾಗೂ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಆಯೋಧ್ಯೆಯಲ್ಲಿನ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಕೂಡ ನೀಡಿತ್ತು.

ರಾಮ ಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಡ್ವಾಣಿ, ಜೋಷಿ 

80ರ ದಶಕದಲ್ಲಿ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯ ನೇತೃತ್ವವನ್ನು ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ವಹಿಸಿದ್ದರು. ಅಡ್ವಾಣಿ ಸೋಮನಾಥದಿಂದ ಅಯೋಧ್ಯೆಯವರೆಗೆ ‘ರಥಯಾತ್ರೆ’ ನಡೆಸಿದ್ದರು. ದೊಡ್ಡ ಪ್ರಮಾಣದ ಹಿಂಸಾಚಾರ, ದಂಗೆ ಮತ್ತು ಹತ್ಯೆಗಳೊಂದಿಗೆ ರಥಯಾತ್ರೆ ಕಾರಣವಾಗಿತ್ತು.  ಆ ಬಳಿಕ ಅಡ್ವಾಣಿ ಅವರನ್ನು ಬಿಹಾರದ ಲಾಲು ಪ್ರಸಾದ್ ಯಾದವ್ ಸರಕಾರ ಬಂಧಿಸಿತ್ತು.

ಇದಾದ ಬಳಿಕ 1992 ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರಿಂದ ಬಾಬರಿ ಮಸೀದಿ ಧ್ವಂಸ ನಡೆಯುತ್ತದೆ. ಆ ಬಳಿಕ ರಾಷ್ಟ್ರವ್ಯಾಪಿ ಕೋಮು ಗಲಭೆ ಆರಂಭವಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ಮಂದಿಯ ಸಾವು ಸಂಭವಿಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರ ವಿರುದ್ಧ, ಎಲ್‌.ಕೆ. ಅಡ್ವಾಣಿ, ಅಶೋಕ್‌ ಸಿಂಘಲ್‌, ವಿನಯ್‌ ಕಟಿಯಾರ್‌, ಉಮಾಭಾರತಿ, ಸಾಧ್ವಿ ಋತಂಬರಾ, ಮುರಳಿಮನೋಹರ ಜೋಶಿ, ಗಿರಿರಾಜ್‌ ಕಿಶೋರ್‌ ಹಾಗೂ ವಿಷ್ಣು ಹರಿ ದಾಲ್ಮಿಯಾ ಅವರ ವಿರುದ್ಧ ಪ್ರಕರಣ ದಾಖಲಾಗತ್ತದೆ.

ಆ ಬಳಿಕ ವಿಚಾರಣೆಯ ವೇಳೆ ಕರಸೇವಕರು ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಅವರ ಸೂಚನೆ ಮೇರೆಗೆ ಸಭೆ ಸೇರಿದ್ದೇವೆ ಮತ್ತು ಮಸೀದಿಗೆ ನುಗ್ಗಿದ್ದೇವೆ ಎಂದು ಹೇಳಿದ್ದರು. ಬಾಬರಿ ಮಸೀದಿಯ ಧ್ವಂಸಕ್ಕೆ ಮೊದಲು ಸುಮಾರು 150,000 ಜನರು ಅಡ್ವಾಣಿ ಮತ್ತು ಜೋಷಿಯ ಭಾಷಣಗಳನ್ನು ಕೇಳಲು ಜಮಾಯಿಸಿದ್ದರು. ಈ ಇಬ್ಬರು ಕೂಡ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳಲ್ಲಿ ಸೇರಿದ್ದರು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...