Homeಮುಖಪುಟರಾಮಮಂದಿರ ಉದ್ಘಾಟನೆ ಗಿಮಿಕ್ ಶೋ: ಬಿಜೆಪಿ ವಿರುದ್ಧ ದೀದಿ ವಾಗ್ದಾಳಿ

ರಾಮಮಂದಿರ ಉದ್ಘಾಟನೆ ಗಿಮಿಕ್ ಶೋ: ಬಿಜೆಪಿ ವಿರುದ್ಧ ದೀದಿ ವಾಗ್ದಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ‘ಇತರ ಸಮುದಾಯಗಳನ್ನು ಹೊರಗಿಡುವ ಹಬ್ಬಗಳನ್ನು ನಾನು ಬೆಂಬಲಿಸುವುದಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಧಾರ್ಮಿಕ ಆಧಾರದ ಮೇಲೆ ಜನಸಾಮಾನ್ಯರನ್ನು ವಿಭಜಿಸುವಲ್ಲಿ ನನಗೆ ನಂಬಿಕೆ ಇಲ್ಲ’ ಎಂದು ಹೇಳಿದರು.

‘ಎಲ್ಲ ಸಮುದಾಯದ ಜನರನ್ನು ಕರೆದುಕೊಂಡು ಹೋಗುವ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವ ಹಬ್ಬಗಳನ್ನು ನಾನು ನಂಬುತ್ತೇನೆ. ಬಿಜೆಪಿ ಇದನ್ನು (ರಾಮಮಂದಿರ ಉದ್ಘಾಟನೆ) ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ ಅದನ್ನು ಗಿಮಿಕ್ ಪ್ರದರ್ಶನವಾಗಿ ಲೋಕಸಭೆ ಚುನಾವಣೆಗೆ ಮುನ್ನ ಮಾಡುತ್ತಿದೆ’ ಎಂದು ಅವರು ಟೀಕಿಸಿದರು.

‘ಜನರನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸುವುದರಲ್ಲಿ ನನಗೆ ನಂಬಿಕೆ ಇಲ್ಲ’ ಎಂದು ಅವರು ಹೇಳಿದರು. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಜನರು ‘ಪ್ರಾಣ ಪ್ರತಿಷ್ಠಾಪನಾ’ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ; ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ: ಪ್ರಧಾನಿ, ಸಿಎಂಗೆ ಪತ್ರ ಬರೆದ 500 ವಿದ್ಯಾರ್ಥಿನಿಯರು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...