Homeಮುಖಪುಟರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

ರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಮ ಮಂದಿರ ಟ್ರಸ್ಟ್ ಮಾಡಲಾಗಿದೆ ಎನ್ನುವ ಭೂ ಕಬಳಿಕೆ ಪ್ರಕರಣವನ್ನು ವರದಿ ಮಾಡಿದ ಒಬ್ಬ ಪತ್ರಕರ್ತ ಇತರ ಇಬ್ಬರ ವಿರುದ್ಧ 18 ಆರೋಪಗಳನ್ನು ಹೊರಿಸಿರುವ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಯೋಧ್ಯೆಯಲ್ಲಿನ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಹೋದರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಭೂ  ವ್ಯವಹಾರ ಆರೋಪಗಳ ಕುರಿತಂತೆ ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಈಗಾಗಲೇ ಚಂಪತ್ ರಾಯ್ ಮತ್ತು ಅವರ ಸಹೋದರರಿಗೆ “ಕ್ಲೀನ್ ಚಿಟ್” ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಚಂಪತ್ ರಾಯ್ ಅವರ ಸಹೋದರ ಸಂಜಯ್ ಬನ್ಸಾಲ್ ನೀಡಿದ ದೂರಿನ ಆಧಾರದ ಮೇಲೆ ಪತ್ರಕರ್ತ ವಿನೀತ್ ನರೈನ್, ಅಲ್ಕಾ ಲಹೋಟಿ ಮತ್ತು ರಜನೀಶ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂವರೂ ವಿಎಚ್‌ಪಿ ನಾಯಕನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಸಂಚು ರೂಪಿಸಿದ್ದಾರೆ ಮತ್ತು ಈ ಮೂಲಕ ದೇಶಾದ್ಯಂತ ಕೋಟ್ಯಾಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂರು ದಿನಗಳ ಹಿಂದೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿನೀತ್ ನರೈನ್ ಅವರು, ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‍ರಾಯ್‍  ಅವರು ತಮ್ಮ ಸಹೋದರರು ಬಿಜ್ನೋರ್‌ನಲ್ಲಿ ಭೂ ಕಬಳಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಎನ್‌ಆರ್‌ಐ ಅಲ್ಕಾ ಲಹೋಟಿ (ಎಫ್‌ಐಆರ್‌ನಲ್ಲಿ ಸಹ ಹೆಸರಿಸಲಾಗಿದೆ) ಒಡೆತನದ 20 ಸಾವಿರ ಚದರ ಮೀಟರ್ ಭೂಮಿಯನ್ನು ದೋಚಲು ಚಂಪತ್‍ರಾಯ್‍ ತಮ್ಮ ಸಹೋದರರಿಗೆ ಸಹಾಯ ಮಾಡಿದ್ದಾರೆ ಎಂದು ಪೋಸ್ಟ್‌ನಲ್ಲಿ ನರೈನ್ ಆರೋಪಿಸಿದ್ದಾರೆ.

ಅಲ್ಕಾ ಲಹೋಟಿ ಅವರು 2018ರಿಂದ ಅತಿಕ್ರಮಣದಾರರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತ ಬಂದಿದ್ದಾರೆ.

ತನ್ನ ದೂರಿನಲ್ಲಿ, ಸಂಜಯ್ ಬನ್ಸಾಲ್, ‘ ಪ್ರಕರಣದ ಸತ್ಯಸಂಗತಿಗಳನ್ನು ತಿಳಿಸುವಂತೆ ನರೈನ್‍ ಅವರಿಗೆ ಫೋನ್‍ ಮಾಡಿದ್ದೆ. ಆದರೆ, ರಜನೀಶ್ ಎಂದು ಕರೆದುಕೊಳ್ಳುವ ವ್ಯಕ್ತಿಯೊಬ್ಬರು ಫೋನ್ ಎತ್ತಿಕೊಂಡು, ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ”ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಟ್ವಿಟರ್‌ನಲ್ಲಿ ವೀಡಿಯೊ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಚಂಪತ್‍ರಾಯ್‍ ಸಹೋದರ ಬನ್ಸಾಲ್ ಅವರ ಆವೃತ್ತಿಯನ್ನು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಪೊಲೀಸ್ ತಂಡ ಇನ್ನೂ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು  ಅದೇ ಪೊಲೀಸ್‍ ಮುಖ್ಯಸ್ಥರು ಹೇಳಿದ್ದಾರೆ.

“ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಂಪತ್ ರಾಯ್ ವಿಎಚ್‌ಪಿಯ ಹಿರಿಯ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್ ಸದಸ್ಯರಾಗಿದ್ದಾರೆ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಮತ್ತು ಅವರ ಸಂಬಂಧಿಕರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂಬುದು ಮೇಲ್ನೋಟಕ್ಕೆ ಅನಿಸುತ್ತದೆ. ನಾವು ಸತ್ಯವನ್ನು ತಿಳಿಯಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಿಜ್ನೋರ್ ಪೊಲೀಸ್ ಮುಖ್ಯಸ್ಥ ಡಾ.ರಾಮ್‍ವೀರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...