Homeಮುಖಪುಟರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

ರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಮ ಮಂದಿರ ಟ್ರಸ್ಟ್ ಮಾಡಲಾಗಿದೆ ಎನ್ನುವ ಭೂ ಕಬಳಿಕೆ ಪ್ರಕರಣವನ್ನು ವರದಿ ಮಾಡಿದ ಒಬ್ಬ ಪತ್ರಕರ್ತ ಇತರ ಇಬ್ಬರ ವಿರುದ್ಧ 18 ಆರೋಪಗಳನ್ನು ಹೊರಿಸಿರುವ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಯೋಧ್ಯೆಯಲ್ಲಿನ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಹೋದರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಭೂ  ವ್ಯವಹಾರ ಆರೋಪಗಳ ಕುರಿತಂತೆ ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಈಗಾಗಲೇ ಚಂಪತ್ ರಾಯ್ ಮತ್ತು ಅವರ ಸಹೋದರರಿಗೆ “ಕ್ಲೀನ್ ಚಿಟ್” ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಚಂಪತ್ ರಾಯ್ ಅವರ ಸಹೋದರ ಸಂಜಯ್ ಬನ್ಸಾಲ್ ನೀಡಿದ ದೂರಿನ ಆಧಾರದ ಮೇಲೆ ಪತ್ರಕರ್ತ ವಿನೀತ್ ನರೈನ್, ಅಲ್ಕಾ ಲಹೋಟಿ ಮತ್ತು ರಜನೀಶ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂವರೂ ವಿಎಚ್‌ಪಿ ನಾಯಕನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಸಂಚು ರೂಪಿಸಿದ್ದಾರೆ ಮತ್ತು ಈ ಮೂಲಕ ದೇಶಾದ್ಯಂತ ಕೋಟ್ಯಾಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂರು ದಿನಗಳ ಹಿಂದೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿನೀತ್ ನರೈನ್ ಅವರು, ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‍ರಾಯ್‍  ಅವರು ತಮ್ಮ ಸಹೋದರರು ಬಿಜ್ನೋರ್‌ನಲ್ಲಿ ಭೂ ಕಬಳಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಎನ್‌ಆರ್‌ಐ ಅಲ್ಕಾ ಲಹೋಟಿ (ಎಫ್‌ಐಆರ್‌ನಲ್ಲಿ ಸಹ ಹೆಸರಿಸಲಾಗಿದೆ) ಒಡೆತನದ 20 ಸಾವಿರ ಚದರ ಮೀಟರ್ ಭೂಮಿಯನ್ನು ದೋಚಲು ಚಂಪತ್‍ರಾಯ್‍ ತಮ್ಮ ಸಹೋದರರಿಗೆ ಸಹಾಯ ಮಾಡಿದ್ದಾರೆ ಎಂದು ಪೋಸ್ಟ್‌ನಲ್ಲಿ ನರೈನ್ ಆರೋಪಿಸಿದ್ದಾರೆ.

ಅಲ್ಕಾ ಲಹೋಟಿ ಅವರು 2018ರಿಂದ ಅತಿಕ್ರಮಣದಾರರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತ ಬಂದಿದ್ದಾರೆ.

ತನ್ನ ದೂರಿನಲ್ಲಿ, ಸಂಜಯ್ ಬನ್ಸಾಲ್, ‘ ಪ್ರಕರಣದ ಸತ್ಯಸಂಗತಿಗಳನ್ನು ತಿಳಿಸುವಂತೆ ನರೈನ್‍ ಅವರಿಗೆ ಫೋನ್‍ ಮಾಡಿದ್ದೆ. ಆದರೆ, ರಜನೀಶ್ ಎಂದು ಕರೆದುಕೊಳ್ಳುವ ವ್ಯಕ್ತಿಯೊಬ್ಬರು ಫೋನ್ ಎತ್ತಿಕೊಂಡು, ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ”ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಟ್ವಿಟರ್‌ನಲ್ಲಿ ವೀಡಿಯೊ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಚಂಪತ್‍ರಾಯ್‍ ಸಹೋದರ ಬನ್ಸಾಲ್ ಅವರ ಆವೃತ್ತಿಯನ್ನು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಪೊಲೀಸ್ ತಂಡ ಇನ್ನೂ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು  ಅದೇ ಪೊಲೀಸ್‍ ಮುಖ್ಯಸ್ಥರು ಹೇಳಿದ್ದಾರೆ.

“ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಂಪತ್ ರಾಯ್ ವಿಎಚ್‌ಪಿಯ ಹಿರಿಯ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್ ಸದಸ್ಯರಾಗಿದ್ದಾರೆ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಮತ್ತು ಅವರ ಸಂಬಂಧಿಕರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂಬುದು ಮೇಲ್ನೋಟಕ್ಕೆ ಅನಿಸುತ್ತದೆ. ನಾವು ಸತ್ಯವನ್ನು ತಿಳಿಯಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಿಜ್ನೋರ್ ಪೊಲೀಸ್ ಮುಖ್ಯಸ್ಥ ಡಾ.ರಾಮ್‍ವೀರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...